ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು ಎನ್ನುವ ವಾದಕ್ಕೆ ತುಳುನಾಡಿನ ರಾಜಕಾರಣಿಗಳ ಬೆಂಬಲ ದೊರಕಿದ್ದು, ಈ ಬಗ್ಗೆ ಶುಕ್ರವಾರ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಸಲ್ಲಿಸಿದ್ದು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ಕೋರಿದ್ದಾರೆ.
ಈ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಅವರು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ತುಳು ಭಾಷೆಯಲ್ಲಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ತುಳು ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡಬೇಕು ಎನ್ನುವ ನಿಟ್ಟಿನಲ್ಲಿ ಇತ್ತೀಚೆಗೆ ಜೈ ತುಳುನಾಡ್ ಸೇರಿದಂತೆ ಹಲವಾರು ತುಳು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೇ, ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಹೋರಾಟ ನಡೆಸಿದ್ದರು. ಇದರೊಂದಿಗೆ ತುಳು ಭಾಷೆಯ ಉತ್ತೇಜನಕ್ಕಾಗಿ ಟ್ವಿಟ್ಟರ್ ಅಭಿಯಾನವನ್ನು ಕೂಡಾ ಮಾಡಿದ್ದರು. ಪ್ರಸ್ತುತ ರಾಜಕಾರಣಿಗಳು ಸೇರಿದಂತೆ ಸೆಲೆಬ್ರಿಟಿಗಳು ಹಾಗೂ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…