ಮಂಗಳೂರು: ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲೇ ನೀಡಬೇಕು ಎನ್ನುವ ವಾದಕ್ಕೆ ತುಳುನಾಡಿನ ರಾಜಕಾರಣಿಗಳ ಬೆಂಬಲ ದೊರಕಿದ್ದು, ಈ ಬಗ್ಗೆ ಶುಕ್ರವಾರ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಮನವಿ ಸಲ್ಲಿಸಿದ್ದು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ಕೋರಿದ್ದಾರೆ.
ಈ ಬಗ್ಗೆ ಶಾಸಕ ವೇದವ್ಯಾಸ್ ಕಾಮತ್ ಅವರು, ಕೇಂದ್ರದ ಹೊಸ ಶಿಕ್ಷಣ ರೀತಿಯ ಪ್ರಕಾರ, ಪ್ರಾಥಮಿಕ ಶಿಕ್ಷಣವನ್ನು ತುಳು ಭಾಷೆಯಲ್ಲಿ ನೀಡಬೇಕೆಂದು ತುಳು ಭಾಷೆಯಲ್ಲಿ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ತುಳು ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡಬೇಕು ಎನ್ನುವ ನಿಟ್ಟಿನಲ್ಲಿ ಇತ್ತೀಚೆಗೆ ಜೈ ತುಳುನಾಡ್ ಸೇರಿದಂತೆ ಹಲವಾರು ತುಳು ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೇ, ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಂತೆ ಹೋರಾಟ ನಡೆಸಿದ್ದರು. ಇದರೊಂದಿಗೆ ತುಳು ಭಾಷೆಯ ಉತ್ತೇಜನಕ್ಕಾಗಿ ಟ್ವಿಟ್ಟರ್ ಅಭಿಯಾನವನ್ನು ಕೂಡಾ ಮಾಡಿದ್ದರು. ಪ್ರಸ್ತುತ ರಾಜಕಾರಣಿಗಳು ಸೇರಿದಂತೆ ಸೆಲೆಬ್ರಿಟಿಗಳು ಹಾಗೂ ಸಂಘಟನೆಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…