ಮಂಗಳೂರು: ಪ್ರೀತಿಸಿ ಮದುವೆಯಾದ ಬಳಿಕ ಪತಿ ತನಗೆ ಜೀವ ಬೆದರಿಕೆ ಹಾಕಿ ಹಣ, ಒಡವೆ ಇತ್ಯಾದಿ ಪಡೆದು, ವಿದೇಶಕ್ಕೆ ಹೋಗಿ ಇನ್ನೊಂದು ಯುವತಿಯನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಲು ಸಿದ್ಧತೆ ನಡೆಸುವ ಮೂಲಕ ವಂಚಿಸಿದ್ದಾನೆ. ಆತನ ಮನೆಯವರೂ ದೈಹಿಕ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೆರ್ಮುದೆ ನಿವಾಸಿಗಳಾದ ಪತಿ ಮನೀಷ್, ಅತ್ತೆ ಕುಮಾರಿ, ಮೈದುನ ಕಾರ್ತಿಕ್ ಮತ್ತು ಆತನ ಪತ್ನಿ ದೀಕ್ಷಾ ಎಂಬವರ ವಿರುದ್ಧ ಕಾವೂರು ನಿವಾಸಿ ಪ್ರೀತಿ ದೂರು ನೀಡಿದ್ದಾರೆ.
2017ರಲ್ಲಿ ಪೆರ್ಮುದೆ ನಿವಾಸಿ ಮನೀಷ್ ಪರಿಚಯವಾಗಿದೆ. ಆತ ಪ್ರೀತಿಸುವುದಾಗಿ ನಂಬಿಸಿ, ಮನೆಯವರೊಡನೆ ಒಳ್ಳೆಯವನಾಗಿ ವರ್ತಿಸಿದ್ದಾನೆ. 2021ರ ನ.21ರಂದು ಬಂಟ್ವಾಳದಲ್ಲಿ ಆತನನ್ನು ಮದುವೆಯಾಗಿದ್ದೇನೆ. ಮದುವೆಯ ಎಲ್ಲ ಖರ್ಚು ವೆಚ್ಚವನ್ನು ನನ್ನ ಮನೆಯವರೇ ಭರಿಸಿದ್ದಾರೆ.
ಇದನ್ನೂ ಓದಿ:
ಬಳಿಕ ಆತನ ಮನೆಯಾದ ಪೆರ್ಮುದೆಯಲ್ಲಿ ವಾಸವಾಗಿದ್ದೆ. ಅಲ್ಲಿ ಮನಿಷ್, ಅತ್ತೆ, ಮೈದುನ, ಆತನ ಹೆಂಡತಿ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡಲು ಆರಂಭಿಸಿದ್ದಾರೆ. ತವರು ಮನೆಯಿಂದ ಕೊಟ್ಟಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿ, ಮನೆಯ ಖರ್ಚಿಗೂ ಹಣ ಪಡೆದಿದ್ದಾರೆ. ಈ ಬಗ್ಗೆ ಆಕ್ಷೇಪಿಸಿದರೆ ಹೊಡೆದು, ಬೈಯುತ್ತಿದ್ದರು. ಯಾರಿಗಾದರೂ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.
ಮದುವೆಯ ಒಂದು ವರ್ಷದ ಬಳಿಕ ಮನೀಷ್ ವಿದೇಶಕ್ಕೆ ಹೋಗಿದ್ದು, 2024ರ ಜೂನ್ ನಲ್ಲಿ ವಾಪಾಸು ಬಂದಾಗ ಮತ್ತೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾನೆ. ಆಗಸ್ಟ್ ನಲ್ಲಿ ವಿದೇಶಕ್ಕೆ ಹೋದ ಬಳಿಕ ಅಲ್ಲಿ ಸ್ವಾತಿ ಎಂಬಾಕೆಯನ್ನು ಪ್ರೀತಿಸುತ್ತಿರುವ ವಿಚಾರ ತಿಳಿದು ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಕೆಟ್ಟದಾಗಿ ಬೈದು, ವಿಚ್ಛೇದನ ಕೊಟ್ಟು ಆಕೆಯನ್ನು ಮದುವೆಯಾಗುವುದಾಗಿ ತಿಳಿಸಿ ಸಂಪರ್ಕ ಕಡಿತಗೊಳಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ:
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…