Featured

ಮಂಗಳೂರು:  ಪ್ರೀತಿಸಿ ಮದುವೆಯಾದ ಬಳಿಕ ಜೀವ ಬೆದರಿಕೆ ; ವಿದೇಶಕ್ಕೆ ಹೋಗಿ ಇನ್ನೊಂದು ಮದುವೆಗೆ ಸಿದ್ಧತೆ ; ಪತ್ನಿಯಿಂದ ದೂರು ದಾಖಲು – vishwanews24

ಮಂಗಳೂರು:  ಪ್ರೀತಿಸಿ ಮದುವೆಯಾದ ಬಳಿಕ ಜೀವ ಬೆದರಿಕೆ ; ವಿದೇಶಕ್ಕೆ ಹೋಗಿ ಇನ್ನೊಂದು ಮದುವೆಗೆ ಸಿದ್ಧತೆ ; ಪತ್ನಿಯಿಂದ ದೂರು ದಾಖಲು

ಮಂಗಳೂರು: ಪ್ರೀತಿಸಿ ಮದುವೆಯಾದ ಬಳಿಕ ಪತಿ ತನಗೆ ಜೀವ ಬೆದರಿಕೆ ಹಾಕಿ ಹಣ, ಒಡವೆ ಇತ್ಯಾದಿ ಪಡೆದು, ವಿದೇಶಕ್ಕೆ ಹೋಗಿ ಇನ್ನೊಂದು ಯುವತಿಯನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಲು ಸಿದ್ಧತೆ ನಡೆಸುವ ಮೂಲಕ ವಂಚಿಸಿದ್ದಾನೆ. ಆತನ ಮನೆಯವರೂ ದೈಹಿಕ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೆರ್ಮುದೆ ನಿವಾಸಿಗಳಾದ ಪತಿ ಮನೀಷ್, ಅತ್ತೆ ಕುಮಾರಿ, ಮೈದುನ ಕಾರ್ತಿಕ್ ಮತ್ತು ಆತನ ಪತ್ನಿ ದೀಕ್ಷಾ ಎಂಬವರ ವಿರುದ್ಧ ಕಾವೂರು ನಿವಾಸಿ ಪ್ರೀತಿ ದೂರು ನೀಡಿದ್ದಾರೆ.

2017ರಲ್ಲಿ ಪೆರ್ಮುದೆ ನಿವಾಸಿ ಮನೀಷ್ ಪರಿಚಯವಾಗಿದೆ. ಆತ ಪ್ರೀತಿಸುವುದಾಗಿ ನಂಬಿಸಿ, ಮನೆಯವರೊಡನೆ ಒಳ್ಳೆಯವನಾಗಿ ವರ್ತಿಸಿದ್ದಾನೆ. 2021ರ ನ.21ರಂದು ಬಂಟ್ವಾಳದಲ್ಲಿ ಆತನನ್ನು ಮದುವೆಯಾಗಿದ್ದೇನೆ. ಮದುವೆಯ ಎಲ್ಲ ಖರ್ಚು ವೆಚ್ಚವನ್ನು ನನ್ನ ಮನೆಯವರೇ ಭರಿಸಿದ್ದಾರೆ.

ಇದನ್ನೂ ಓದಿ:

 

ಬಳಿಕ ಆತನ ಮನೆಯಾದ ಪೆರ್ಮುದೆಯಲ್ಲಿ ವಾಸವಾಗಿದ್ದೆ. ಅಲ್ಲಿ ಮನಿಷ್, ಅತ್ತೆ, ಮೈದುನ, ಆತನ ಹೆಂಡತಿ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡಲು ಆರಂಭಿಸಿದ್ದಾರೆ. ತವರು ಮನೆಯಿಂದ ಕೊಟ್ಟಿದ್ದ ಚಿನ್ನಾಭರಣಗಳನ್ನು ಮಾರಾಟ ಮಾಡಿ, ಮನೆಯ ಖರ್ಚಿಗೂ ಹಣ ಪಡೆದಿದ್ದಾರೆ. ಈ ಬಗ್ಗೆ ಆಕ್ಷೇಪಿಸಿದರೆ ಹೊಡೆದು, ಬೈಯುತ್ತಿದ್ದರು. ಯಾರಿಗಾದರೂ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಮದುವೆಯ ಒಂದು ವರ್ಷದ ಬಳಿಕ ಮನೀಷ್ ವಿದೇಶಕ್ಕೆ ಹೋಗಿದ್ದು, 2024ರ ಜೂನ್ ನಲ್ಲಿ ವಾಪಾಸು ಬಂದಾಗ ಮತ್ತೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾನೆ. ಆಗಸ್ಟ್ ನಲ್ಲಿ ವಿದೇಶಕ್ಕೆ ಹೋದ ಬಳಿಕ ಅಲ್ಲಿ ಸ್ವಾತಿ ಎಂಬಾಕೆಯನ್ನು ಪ್ರೀತಿಸುತ್ತಿರುವ ವಿಚಾರ ತಿಳಿದು ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಕೆಟ್ಟದಾಗಿ ಬೈದು, ವಿಚ್ಛೇದನ ಕೊಟ್ಟು ಆಕೆಯನ್ನು ಮದುವೆಯಾಗುವುದಾಗಿ ತಿಳಿಸಿ ಸಂಪರ್ಕ ಕಡಿತಗೊಳಿಸಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

1 hour ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago