ಮಂಗಳೂರು : ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು.
ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದ. ಯುವತಿ ಡಿಸೆಂಬರ್ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಳು. ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…
ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…
ಕರ್ನಾಟಕದಲ್ಲಿ ಯಾವುದೇ ರೀತಿಯ ಹಿಂಸೆಗೆ ಅವಕಾಶ ನೀಡುವುದಿಲ್ಲ : ಬಿ.ಕೆ. ಹರಿಪ್ರಸಾದ್ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು…
ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು ಉಡುಪಿ: ಕರಾವಳಿಯಲ್ಲಿ ನಿರೀಕ್ಷಿತ ಮುಂಗಾರು ಮಳೆಯಾಗದ ಕಾರಣ ಈ ಋತುವಿನಲ್ಲಿ…
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…