Featured

ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24

ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24

ಮಂಗಳೂರು: ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್‌ ಪ್ರೇಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆಯಾಮದಲ್ಲೂ ತನಿಖೆ ಪ್ರಗತಿಯಲ್ಲಿದೆ. ತಂದೆ ಚಿತ್ತರಂಜನ್‌ ಅವರು, ”ನನ್ನ ಮಗಳು ಪ್ರೇಕ್ಷಾಳ ಅಂತಿಮ ಸಂಸ್ಕಾರದ ವೇಳೆಯೂ ಗಾಂಜಾ ಗ್ಯಾಂಗ್‌ ಬೆದರಿಕೆಯೊಡ್ಡಿದೆ” ಎಂದು ತಿಳಿಸಿದ್ದಾರೆ.

”ಗಾಂಜಾ ಗ್ಯಾಂಗ್ ಬಗ್ಗೆ ಮಾತನಾಡದಂತೆ ಈ ತಂಡವು ನಮಗೆ ಎಚ್ಚರಿಕೆ ನೀಡಿದೆ. ನಮಗೆ ಮಾತ್ರವಲ್ಲದೆ ಸಮೀಪದ ಅಂಗಡಿ, ನೆರೆಹೊರೆಯ ಮನೆಯವರಿಗೆಲ್ಲಾ ಈ ತಂಡವು ಬೆದರಿಸಿದೆ. ನಮಗೆಲ್ಲರಿಗೂ ಇಷ್ಟೆಲ್ಲಾ ಕಿರುಕುಳ ನೀಡಿದವರು ಇನ್ನು ನನ್ನ ಮಗಳಿಗೆಷ್ಟು ಕಿರುಕುಳ ನೀಡಿರಬಹುದು” ಎಂದು ಪ್ರಶ್ನಿಸಿರುವ ಅವರು, ”ಇದು ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ” ಎಂದು ದೂರಿದ್ದಾರೆ.

ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್‌‌ಪೋರ್ಟ್‌ನಲ್ಲಿ ವ್ಯಕ್ತಿಯ ಬಂಧನ -Vishwanews24

”ನನ್ನ ಭವಿಷ್ಯವೇ ಬೆಂಗಳೂರಿನಲ್ಲಿ ನಡೆಯುವ ಫೋಟೋ ಶೂಟ್‌ನಲ್ಲಿದೆ. ಪರಿಚಯಸ್ಥ ಯುವಕನೇ ನನ್ನನ್ನು ಕರೆದುಕೊಂಡು ಹೋಗುತ್ತಾನೆ ಎಂದು ಪ್ರೇಕ್ಷಾ ತಿಳಿಸಿದ ಹಿನ್ನೆಲೆಯಲ್ಲಿ ಪ್ರೇಕ್ಷಾಳಿಗೆ ನಾವು ಬೆಂಗಳೂರಿಗೆ ತೆರಳಲು ಅನುಮತಿ ನೀಡಿದ್ದೆವು. ಈ ಹಿನ್ನೆಲೆ ಅವಳು ಸಾವನ್ನಪ್ಪುವ ಹಿಂದಿನ ದಿನವೇ ಬ್ಯೂಟಿಪಾರ್ಲರ್ ಹೋಗಿ ಫೇಷಿಯಲ್ ಮಾಡಿಸಿಕೊಂಡಿದ್ದಳು. ಆದರೆ ಗಾಂಜಾ ವ್ಯಸನಿ ಗೆಳೆಯ ಯತೀನ್‌ರಾಜ್ ಆಕೆ ಬೆಂಗಳೂರಿಗೆ ಹೋಗಬಾರದು ಎಂದು ಬೆದರಿಕೆ ಹಾಕಲು ಆರಂಭಿಸಿದ. ಇದನ್ನು ಆಕೆ ತನ್ನ ಸಹೋದರಿಯಲ್ಲಿ ಮಾತ್ರ ಹೇಳಿದ್ದಳು. ಬೇರೆ ಯಾರಿಗೂ ತಿಳಿದಿರಲಿಲ್ಲ. ಆತ್ಮಹತ್ಯೆ ಮಾಡಿಕೊಂಡ ದಿನ ಬೆಳಿಗ್ಗೆ 10.30ಕ್ಕೆ ಪ್ರೇಕ್ಷಾ ನನಗೆ ಕರೆ ಮಾಡಿ ಮಧ್ಯಾಹ್ನ ಬೆಂಗಳೂರಿಗೆ ಹೋಗುತ್ತೇನೆ ಎಂದು ತಿಳಿಸಿದ್ದಳು. ಆದರೆ ಬಳಿಕ ನಡೆದದ್ದೆ ಬೇರೆ” ಎಂದು ತಂದೆ ಚಿತ್ತರಂಜನ್‌ ಹೇಳಿದ್ದಾರೆ.

ಇನ್ನು ಪ್ರೇಕ್ಷಾ ಮನೆಗೆ ಹಲವು ನಾಯಕರುಗಳು ಭೇಟಿ ನೀಡುತ್ತಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಅಂಗಾರ ಅವರು ಕೂಡಾ ಭೇಟಿ ನೀಡಿದ್ದು, ಈ ಪ್ರಕರಣದ ಹಿಂದೆ ಯಾರಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಈಗಾಗಲೇ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ನಾವು ಯಾರೂ ಕೂಡಾ ಯಾವ ಗಾಂಜಾದವರಿಗೂ ಹೆದರಬೇಕಾಗಿಲ್ಲ. ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

13 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago