Featured

ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24

ಮಂಗಳೂರು : ಪ್ರೇಕ್ಷಾ ಆತ್ಮಹತ್ಯೆ ಪ್ರಕರಣ : ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ : ತಂದೆ ಚಿತ್ತರಂಜನ್ -Vishwanews24

ಮಂಗಳೂರು: ಕುಂಪಲ ಆಶ್ರಯಕಾಲನಿ ನಿವಾಸಿ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್‌ ಪ್ರೇಕ್ಷಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆಯಾಮದಲ್ಲೂ ತನಿಖೆ ಪ್ರಗತಿಯಲ್ಲಿದೆ. ತಂದೆ ಚಿತ್ತರಂಜನ್‌ ಅವರು, ”ನನ್ನ ಮಗಳು ಪ್ರೇಕ್ಷಾಳ ಅಂತಿಮ ಸಂಸ್ಕಾರದ ವೇಳೆಯೂ ಗಾಂಜಾ ಗ್ಯಾಂಗ್‌ ಬೆದರಿಕೆಯೊಡ್ಡಿದೆ” ಎಂದು ತಿಳಿಸಿದ್ದಾರೆ.

”ಗಾಂಜಾ ಗ್ಯಾಂಗ್ ಬಗ್ಗೆ ಮಾತನಾಡದಂತೆ ಈ ತಂಡವು ನಮಗೆ ಎಚ್ಚರಿಕೆ ನೀಡಿದೆ. ನಮಗೆ ಮಾತ್ರವಲ್ಲದೆ ಸಮೀಪದ ಅಂಗಡಿ, ನೆರೆಹೊರೆಯ ಮನೆಯವರಿಗೆಲ್ಲಾ ಈ ತಂಡವು ಬೆದರಿಸಿದೆ. ನಮಗೆಲ್ಲರಿಗೂ ಇಷ್ಟೆಲ್ಲಾ ಕಿರುಕುಳ ನೀಡಿದವರು ಇನ್ನು ನನ್ನ ಮಗಳಿಗೆಷ್ಟು ಕಿರುಕುಳ ನೀಡಿರಬಹುದು” ಎಂದು ಪ್ರಶ್ನಿಸಿರುವ ಅವರು, ”ಇದು ಗಾಂಜಾ ತಂಡ ನನ್ನ ಮಗಳು ಆತ್ಮಹತ್ಯೆ ಮಾಡುವಂತೆ ಕಿರುಕುಳ ನೀಡಿದೆ” ಎಂದು ದೂರಿದ್ದಾರೆ.

ಮಂಗಳೂರು : ವಿಶೇಷವಾಗಿ ತಯಾರಿಸಿದ ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಏರ್‌‌ಪೋರ್ಟ್‌ನಲ್ಲಿ ವ್ಯಕ್ತಿಯ ಬಂಧನ -Vishwanews24

”ನನ್ನ ಭವಿಷ್ಯವೇ ಬೆಂಗಳೂರಿನಲ್ಲಿ ನಡೆಯುವ ಫೋಟೋ ಶೂಟ್‌ನಲ್ಲಿದೆ. ಪರಿಚಯಸ್ಥ ಯುವಕನೇ ನನ್ನನ್ನು ಕರೆದುಕೊಂಡು ಹೋಗುತ್ತಾನೆ ಎಂದು ಪ್ರೇಕ್ಷಾ ತಿಳಿಸಿದ ಹಿನ್ನೆಲೆಯಲ್ಲಿ ಪ್ರೇಕ್ಷಾಳಿಗೆ ನಾವು ಬೆಂಗಳೂರಿಗೆ ತೆರಳಲು ಅನುಮತಿ ನೀಡಿದ್ದೆವು. ಈ ಹಿನ್ನೆಲೆ ಅವಳು ಸಾವನ್ನಪ್ಪುವ ಹಿಂದಿನ ದಿನವೇ ಬ್ಯೂಟಿಪಾರ್ಲರ್ ಹೋಗಿ ಫೇಷಿಯಲ್ ಮಾಡಿಸಿಕೊಂಡಿದ್ದಳು. ಆದರೆ ಗಾಂಜಾ ವ್ಯಸನಿ ಗೆಳೆಯ ಯತೀನ್‌ರಾಜ್ ಆಕೆ ಬೆಂಗಳೂರಿಗೆ ಹೋಗಬಾರದು ಎಂದು ಬೆದರಿಕೆ ಹಾಕಲು ಆರಂಭಿಸಿದ. ಇದನ್ನು ಆಕೆ ತನ್ನ ಸಹೋದರಿಯಲ್ಲಿ ಮಾತ್ರ ಹೇಳಿದ್ದಳು. ಬೇರೆ ಯಾರಿಗೂ ತಿಳಿದಿರಲಿಲ್ಲ. ಆತ್ಮಹತ್ಯೆ ಮಾಡಿಕೊಂಡ ದಿನ ಬೆಳಿಗ್ಗೆ 10.30ಕ್ಕೆ ಪ್ರೇಕ್ಷಾ ನನಗೆ ಕರೆ ಮಾಡಿ ಮಧ್ಯಾಹ್ನ ಬೆಂಗಳೂರಿಗೆ ಹೋಗುತ್ತೇನೆ ಎಂದು ತಿಳಿಸಿದ್ದಳು. ಆದರೆ ಬಳಿಕ ನಡೆದದ್ದೆ ಬೇರೆ” ಎಂದು ತಂದೆ ಚಿತ್ತರಂಜನ್‌ ಹೇಳಿದ್ದಾರೆ.

ಇನ್ನು ಪ್ರೇಕ್ಷಾ ಮನೆಗೆ ಹಲವು ನಾಯಕರುಗಳು ಭೇಟಿ ನೀಡುತ್ತಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಅಂಗಾರ ಅವರು ಕೂಡಾ ಭೇಟಿ ನೀಡಿದ್ದು, ಈ ಪ್ರಕರಣದ ಹಿಂದೆ ಯಾರಿದ್ದರೂ ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಈಗಾಗಲೇ ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ನಾವು ಯಾರೂ ಕೂಡಾ ಯಾವ ಗಾಂಜಾದವರಿಗೂ ಹೆದರಬೇಕಾಗಿಲ್ಲ. ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

15 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

15 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

15 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

16 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

16 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

18 hours ago