ಮಂಗಳೂರು,: ಯುವತಿಯ ಹತ್ಯೆಗೆ ಯತ್ನಿಸಿದ್ದ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆದರೆ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಾರ್ಕಳದ ನಿಟ್ಟೆಯಲ್ಲಿ ಎಂಬಿಎ ವಿದ್ಯಾರ್ಥಿನಿಯಾಗಿದ್ದ ದೇರಳಕಟ್ಟೆ ಬಗಂಬಿಲದ ನಿವಾಸಿ ದೀಕ್ಷಾಎಂಬಾಕೆಯ ಮೇಲೆ ನಗರದ ಶಕ್ತಿನಗರದ ರಾಮಶಕ್ತಿ ಮಿಷನ್ ಬಳಿಯ ನಿವಾಸಿ ಸುಶಾಂತ್ಎಂಬಾತನ ಮೇಲೆ ಚೂರಿಯಿಂದ ಇರಿದು ಆಕೆಯ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ. ವಿದ್ಯಾರ್ಥಿನಿ ಕಾಲೇಜು ಮುಗಿಸಿ ರಸ್ತೆಯಲ್ಲಿ ತನ್ನ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದಾಳಿ ನಡೆದಿತ್ತು.
ದೀಕ್ಷಾ ಎಂದಿನಂತೆ ದೇರಳಕಟ್ಟೆಯ ಕ್ಷೇಮಾ ಬಸ್ ನಿಲ್ದಾಣದಲ್ಲಿ ಇಳಿದು ಆಸ್ಪತ್ರೆಯ ಹಿಂಭಾಗದಲ್ಲಿರುವ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಸ್ಕೂಟರ್ನಲ್ಲಿ ಹಿಂದಿನಿಂದ ಬಂದ ಸುಶಾಂತ್ ಇದ್ದಕ್ಕಿದ್ದಂತೆ ಚಾಕುವಿನಿಂದ ಹಲ್ಲೆ ನಡೆಸಿದ್ದ.
ಆಕೆಯನ್ನು ಅಡ್ಡಗಟ್ಟಿದ್ದ ಆತ ೧೨ ಬಾರಿ ಇರಿದಿದ್ದ. ವಿದ್ಯಾರ್ಥಿನಿ ರಕ್ತದ ಮಡುವಿನಲ್ಲಿ ಬಿದ್ದು ನೋವಿನಿಂದ ನರಳುತ್ತಿದ್ದರೂ, ಕನಿಕರ ತೋರದ ಆರೋಪಿ ಆಕೆಯನ್ನು ಪ್ರಶ್ನಿಸುತ್ತಲೇ 12 ಬಾರಿ ಮನಬಂದಂತೆ ಇರಿದ್ದ.
ಸ್ಥಳೀಯರು ಇವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವಿದ್ಯಾರ್ಥಿನಿ ದೀಕ್ಷಾ, ಎದೆ, ಹೊಟ್ಟೆ, ಕುತ್ತಿಗೆ ಕೈ ಕಾಲುಗಳು ಸೇರಿದಂತೆ ದೇಹದ 10-12 ಕಡೆ ಮಾರಕವಾಗಿ ಇರಿದ ಪರಿಣಾಮ ಹೃದಯ, ಕರುಳು ವಿಪರೀತಿ ಹಾನಿಯಾಗಿದೆ. ಗಂಭೀರ ಗಾಯಕ್ಕೆ ಒಳಗಾಗಿರುವ ವಿದ್ಯಾರ್ಥಿನಿ ದೀಕ್ಷಾಳನ್ನು ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯಕ್ಕೆ ಆಸ್ಪತ್ರೆಯಿಂದ ಆರೋಪಿ ಸುಶಾಂತ್ನನ್ನು ಜೈಲ್ ವಾರ್ಡಿಗೆ ಶಿಫ್ಟ್ ಮಾಡಿದ್ದು, ಅಲ್ಲಿಯೇ ಸುಶಾಂತ್ ಚೇತರಿಕೆಯಾಗುತ್ತಿದ್ದಾನೆ. ಆದರೆ ಯುವತಿಗೆ ಅತಿಯಾಗಿ ರಕ್ತಸ್ರಾವ ಹೋಗಿದ್ದು, ಈಗಾಗಲೇ ರಕ್ತ ನೀಡಲಾಗಿದೆ. ಆದರೂ ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…