Featured

ಮಂಗಳೂರು: ಫಲಿತಾಂಶದ ದಿನ ಕಾಂಗ್ರೆಸ್ ಕಣ್ಣೀರು ಸುರಿಸಲಿದೆ :ನಿಜವಾಯಿತು ಜನಾರ್ಧನ ಪೂಜಾರಿ ಭವಿಷ್ಯ -Vishwanews24

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ದಾಖಲಿಸಿದ್ದಾರೆ.

60 ವಾರ್ಡ್ ಗಳ ಸದಸ್ಯ ಬಲದ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 44 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಪಾಲಿಕೆಯ ಅಧಿಕಾರದ ಗದ್ದುಗೆಯಲ್ಲಿ ಕೂರಲು ರೆಡಿಯಾಗಿದೆ.

ಬಿಜೆಪಿ ಈ ಬಾರಿ ಜಯಗಳಿಸಲಿದೆ ಎನ್ನುವ ಹಿರಿಯ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿಯವರ ಭವಿಷ್ಯ ಇಲ್ಲಿ ನಿಜವಾಗಿದೆ.

ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಮೂಲಕ, “ಫಲಿತಾಂಶದ ದಿನ ನ.14 ರಂದು ಕಾಂಗ್ರೆಸ್ ಕಣ್ಣೀರು ಸುರಿಸಲಿದೆ ” ಕಾಂಗ್ರೇಸ್ ಪಕ್ಷ ಅಭ್ಯರ್ಥಿ ಆಯ್ಕೆಯಲ್ಲಿ ನಡೆಸಿದ ಗೊಂದಲ, ಪಕ್ಷದಲ್ಲಿ ಹೆಚ್ಚಾದ ಭಿನ್ನಮತದ ಲಾಭವನ್ನು ಬಿಜೆಪಿ ಪಕ್ಷ ಪಡೆಯುವ ಮೂಲಕ ಮಹಾನಗರ ಪಾಲಿಕೆಯ ಅಧಿಕಾರ ಹಿಡಿಯಲಿದೆ ಎಂದು ಜನಾರ್ಧನ ಪೂಜಾರಿ ಚುನಾವಣೆಗೆ ಮೊದಲೇ ವಿಶ್ಲೇಷಿಸಿದ್ದರು.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯ ಕಾಂಗ್ರೇಸ್ ಮುಖಂಡರಾದ ಜನಾರ್ಧನ ಪೂಜಾರಿಯವರ ಅಭಿಪ್ರಾಯವನ್ನೂ ಜಿಲ್ಲಾ ಕಾಂಗ್ರೇಸ್ ಕೇಳದಿರುವುದೂ ಪೂಜಾರಿ ನಿಷ್ಟರ ಅಸಮಾಧಾನಕ್ಕೂ ಕಾರಣವಾಗಿತ್ತು.

ಕರಾವಳಿಯ ಸಂಸದ ನಳಿನ್ ಕುಮಾರ್ ಒಲಿದ ರಾಜ್ಯಾಧ್ಯಕ್ಷ ಸ್ಥಾನ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ಶಾಸಕ ಭರತ್ ಶೆಟ್ಟಿ ಅವರಿಬ್ಬರು ಟೊಂಕಕಟ್ಟಿ ಪಕ್ಷದ ಗೆಲುವಿಗಾಗಿ ಶ್ರಮಿಸಿದ ರೀತಿ, ಟಿಕೆಟ್ ಆಕಾಂಕ್ಷಿಗಳಲ್ಲಿ ಭಿನ್ನಮತ ಸ್ಪೋಟಗೊಳ್ಳದಂತೆ ಹೊಸ ಮುಖ ಹಾಗೂ ಸಮರ್ಥ ಅಭ್ಯರ್ಥಿಗಳಿಗೆ ಟಿಕೆಟ್, ಬಿಜೆಪಿಯ ಶಿಸ್ತುಬದ್ದ ಪ್ರಚಾರ, ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯ ಪ್ರಚಾರ ಎಲ್ಲವೂ ಬಿಜೆಪಿಯ ಗೆಲುವಿಗೆ ವರವಾಗಿ ಪರಿಣಮಿಸಿ ನಿರೀಕ್ಷೆಗೂ ಮೀರಿದ ಗೆಲುವು ಪಡೆದುಕೊಳ್ಳುವಲ್ಲಿ ಸಫಲವಾಯಿತು.

ಕಾಂಗ್ರೇಸ್ ಪಕ್ಷ ಈ ಬಾರಿ ಕೇವಲ 14 ಸ್ಥಾನಕ್ಕೆ ಮಾತ್ರ ತೃಪ್ತಿ ಪಟ್ಟುಕೊಳ್ಳುವಂತಾಗಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

12 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

13 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

13 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

13 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

13 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

13 hours ago