ಮಂಗಳೂರು: ಸುರತ್ಕಲ್ನಲ್ಲಿ ನಡೆದ ಮಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸ್ ಕಸ್ಟಡಿಯಲ್ಲಿರುವ ಅವರ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಆರೋಪಿಗಳು ಇನ್ನೂ ಎರಡು ಹೆಚ್ಚುವರಿ ವಾಹನಗಳನ್ನು ಬಳಸಿರುವುದು ತಿಳಿದು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಜತೆ ನಿಯಮಾನುಸಾರವೇ ವ್ಯವಹರಿಸಲಾಗಿದೆ. ಸುರತ್ಕಲ್ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಲಾಗಿಲ್ಲ. ಈ ಬಗ್ಗೆ ಸುರತ್ಕಲ್ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಆ ರೀತಿ ಯಾವುದೇ ಆರೋಪಿಗೆ ಠಾಣೆಯಲ್ಲಿ ವಿಶೇಷ ಆತಿಥ್ಯ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಕೆಲವು ಪ್ರಮುಖರು ಈ ಬಗ್ಗೆ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಯಾವ ಆಧಾರದಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾರೆಂದು ಗೊತ್ತಾಗಿಲ್ಲ’ ಎಂದರು.
‘ಫಾಝಿಲ್ ಕುಟುಂಬದ ಬಹುತೇಕ ಸದಸ್ಯರ ಬಳಿ ನನ್ನ ಹಾಗೂ ಹಿರಿಯ ಅಧಿಕಾರಿಗಳ ಮೊಬೈಲ್ ಫೋನ್ ನಂಬರ್ಗಳು ಇವೆ. ಏನಾದರೂ ಅನುಮಾನಗಳು ಇದ್ದಲ್ಲಿ ಗಮನಕ್ಕೆ ತರಬಹುದು. ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ’ ಎಂದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…