Featured

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ದುರಂತ ಸಂಭವಿಸಿದ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಲಾಗಿದೆ.

ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಹಾಗೂ ನಿಝಾಮುದ್ದೀನ್ ಸಾಬ್ ಎಂಬವರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಾಫತ್ ಆಲಿ ಎಂಬವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಇನ್ನು ಹಸನ್ ಅಲಿ, ಮುಹಮ್ಮದ್ ಕರೀಮುಲ್ಲಾ ಮತ್ತು ಹಫೀಝುಲ್ಲಾ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago