Featured

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಫಿಶ್ ಪ್ಯಾಕ್ಟರಿಯಲ್ಲಿ ದುರಂತ ;ಮೃತರ ಸಂಖ್ಯೆ ಐದಕ್ಕೆ ಏರಿಕೆ -Vishwanews24

ಮಂಗಳೂರು: ಬಜ್ಪೆಯಲ್ಲಿರುವ ಮಂಗಳೂರು ವಿಶೇಷ ಆರ್ಥಿಕ ವಲಯದ ಮೀನಿನ ಫ್ಯಾಕ್ಟರಿಯೊಂದರಲ್ಲಿ ಭಾನುವಾರ ರಾತ್ರಿ ದುರಂತ ಸಂಭವಿಸಿದ ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದ್ದು, ಪ್ರಕರಣದ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ಕೇಸು ದಾಖಲಿಸಲಾಗಿದೆ.

ಸಮೀರುಲ್ ಇಸ್ಲಾಂ, ಉಮರ್ ಫಾರೂಕ್ ಹಾಗೂ ನಿಝಾಮುದ್ದೀನ್ ಸಾಬ್ ಎಂಬವರು ಭಾನುವಾರ ರಾತ್ರಿ ಮೃತಪಟ್ಟಿದ್ದು, ಆಸ್ಪತ್ರೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಿರಾಜುಲ್ ಇಸ್ಲಾಂ ಮತ್ತು ಶರಾಫತ್ ಆಲಿ ಎಂಬವರು ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ.

ಇನ್ನು ಹಸನ್ ಅಲಿ, ಮುಹಮ್ಮದ್ ಕರೀಮುಲ್ಲಾ ಮತ್ತು ಹಫೀಝುಲ್ಲಾ ಎಂಬವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಯಾವುದೇ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸದೇ ನಿರ್ಲಕ್ಷ ವಹಿಸಿದ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಂಪನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ ಮತ್ತು ಅಲ್ಲಿನ ಸೂಪರ್ವೈಸರ್ ಮೊಹಮ್ಮದ್ ಅನ್ವರ್ ಹಾಗೂ ಕಂಪನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಸ್ಥಳೀಯ ವ್ಯಕ್ತಿ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನು ಮೃತಪಟ್ಟವರ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದು, ಮೃತದೇಹಗಳನ್ನು ಮಂಗಳೂರಿನ ಎಜೆ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಶವ ಪರೀಕ್ಷೆ ನಡೆಸಿ ಮೃತರ ವಾರಸುದಾರರಿಗೆ ಹಸ್ತಾಂತರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago