ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್ ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಲ ವಿದ್ಯಾರ್ಥಿಗಳು ಎದುರಾಳಿ ತಂಡವನ್ನು ಬೆಂಬಲಿಸಿದ ಕಾರಣದಿಂದಾಗಿ ಎರಡು ತಂಡಗಳ ನಡುವೆ ಜಗಳ ಉಂಟಾಗಿತ್ತು.
ಇದೇ ವಿಚಾರವನ್ನಿಟ್ಟುಕೊಂಡು ಸೋಮವಾರ(ಆ.19ರಂದು) ಸಂಜೆ 6:15ರ ಹೊತ್ತಿಗೆ ಪಾಂಡೇಶ್ವರ ಫೋರಂ ಮಾಲ್ ಬಳಿ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ಹುಡುಗನ ಮೇಲೆ ದಿಯಾನ್, ತಸ್ಲಿಮ್, ಸಲ್ಮಾನ್ ಮತ್ತು ಇತರ ಇಬ್ಬರು 17 ವರ್ಷದ ಅಪ್ರಾಪ್ತ ಹುಡುಗರು ಹಲ್ಲೆ ಮಾಡಿದ್ದರು.
17 ವರ್ಷದ ಅಪ್ರಾಪ್ತ ಹುಡುಗ ಹಾಗೂ ಆತನ ಸ್ನೇಹಿತರನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಕೈ ಕಾಲಿನಿಂದ ಹಲ್ಲೆಗೈದಿದ್ದಾರೆ. ಮಹಾಕಾಳಿ ಪಡ್ಪು, ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳು ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಎನ್ನುವ ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…