ಮಂಗಳೂರು: ಫುಟ್ ಬಾಲ್ ಪಂದ್ಯಾದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಏನಿದು ಘಟನೆ?: ನಗರದ ನೆಹರೂ ಮೈದಾನದಲ್ಲಿ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜಿನ ನಡುವೆ ಫುಟ್ ಬಾಲ್ ಪಂದ್ಯವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೆಲ ವಿದ್ಯಾರ್ಥಿಗಳು ಎದುರಾಳಿ ತಂಡವನ್ನು ಬೆಂಬಲಿಸಿದ ಕಾರಣದಿಂದಾಗಿ ಎರಡು ತಂಡಗಳ ನಡುವೆ ಜಗಳ ಉಂಟಾಗಿತ್ತು.
ಇದೇ ವಿಚಾರವನ್ನಿಟ್ಟುಕೊಂಡು ಸೋಮವಾರ(ಆ.19ರಂದು) ಸಂಜೆ 6:15ರ ಹೊತ್ತಿಗೆ ಪಾಂಡೇಶ್ವರ ಫೋರಂ ಮಾಲ್ ಬಳಿ ಖಾಸಗಿ ಕಾಲೇಜಿನ 17 ವರ್ಷದ ಅಪ್ರಾಪ್ತ ಹುಡುಗನ ಮೇಲೆ ದಿಯಾನ್, ತಸ್ಲಿಮ್, ಸಲ್ಮಾನ್ ಮತ್ತು ಇತರ ಇಬ್ಬರು 17 ವರ್ಷದ ಅಪ್ರಾಪ್ತ ಹುಡುಗರು ಹಲ್ಲೆ ಮಾಡಿದ್ದರು.
17 ವರ್ಷದ ಅಪ್ರಾಪ್ತ ಹುಡುಗ ಹಾಗೂ ಆತನ ಸ್ನೇಹಿತರನ್ನು ಅಪಹರಿಸಿ ಕಾರಿನಲ್ಲಿ ಹಾಕಿಕೊಂಡು ಕೈ ಕಾಲಿನಿಂದ ಹಲ್ಲೆಗೈದಿದ್ದಾರೆ. ಮಹಾಕಾಳಿ ಪಡ್ಪು, ಕಣ್ಣೂರು ಮಸೀದಿ ಬಳಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕರೆದೊಯ್ದು ಮತ್ತಷ್ಟು ಹಲ್ಲೆ ನಡೆಸಿದ್ದಾರೆ.
ಹಲ್ಲೆಗೊಳಗಾದ ವಿದ್ಯಾರ್ಥಿಗಳು ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಹಲ್ಲೆಗೆ ಒಳಗಾದ ವಿದ್ಯಾರ್ಥಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ದಿಯಾನ್ ಮತ್ತು ಸಲ್ಮಾನ್ ಎನ್ನುವ ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…