Featured

ಮಂಗಳೂರು: ಫೆ. 26 ರಂದು ಖಾಸಗಿ ಸಾರಿಗೆ ವಲಯದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಉದ್ಘಾಟನೆ – vishwanews24

ಮಂಗಳೂರು: ಫೆ. 26 ರಂದು ಖಾಸಗಿ ಸಾರಿಗೆ ವಲಯದಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಸಂಚಾರ ಉದ್ಘಾಟನೆ

ಮಂಗಳೂರು: ಕರಾವಳಿಯ ಪ್ರಮುಖ ನಗರ ಮಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಹೊಸ ಇತಿಹಾಸವೊಂದು ಸೃಷ್ಟಿಯಾಗುತ್ತಿದೆ. ನಗರದ ಖಾಸಗಿ ಸಾರಿಗೆ ವಲಯದಲ್ಲಿ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಬಸ್ ಸಂಚಾರಕ್ಕೆ ಸಿದ್ಧವಾಗಿದ್ದು, ಫೆಬ್ರವರಿ 26 ರಂದು ಉದ್ಘಾಟನೆಗೊಳ್ಳಲಿದೆ. ಜೊತೆಗೆ ಉದ್ಘಾಟನೆಗೊಂಡ ಕೆಲವು ದಿನಗಳಲ್ಲೇ ರಸ್ತೆಗಿಳಿಯಲಿದೆ.

ಗಣೇಶ್ ಪ್ರಸಾದ್ ಟ್ರಾವೆಲ್ಸ್ ಸಂಸ್ಥೆಯು ಈ ಪರಿಸರ ಸ್ನೇಹಿ ಹೆಜ್ಜೆಯನ್ನು ಇಟ್ಟಿದ್ದು, ನಗರದ ಪ್ರಮುಖ ಮಾರ್ಗವಾದ ‘ರೂಟ್ ನಂಬರ್ 27’ ಅಂದರೆ ಮಂಗಳಾದೇವಿ-ಸ್ಟೇಟ್ ಬ್ಯಾಂಕ್-ಮಂಗಳಾದೇವಿ ನಡುವೆ ಈ ಬಸ್ ಕಾರ್ಯಾಚರಣೆ ನಡೆಸಲಿದೆ.

ಇದನ್ನೂ ಓದಿ : 👇

ತನ್ನ ನವೀನ ಪ್ರಯತ್ನಗಳ ಮೂಲಕ ಗಮನ ಸೆಳೆದಿರುವ ಗಣೇಶ್ ಪ್ರಸಾದ್ ಟ್ರಾವೆಲ್ಸ್ನ ಮಾಲೀಕರಾದ ದಿಲ್‌ರಾಜ್ ಆಳ್ವ ಅವರು ಮಂಗಳೂರಿನ ಸಾರಿಗೆ ಲೋಕಕ್ಕೆ ಈ ತಾಂತ್ರಿಕ ಬದಲಾವಣೆಯನ್ನು ಪರಿಚಯಿಸುತ್ತಿದ್ದಾರೆ. ಪುಣೆ ಮೂಲದ ನ್ಯೂಟನ್ ಆಟೋ ಸಂಸ್ಥೆಯಿಂದ 9 ಮೀಟರ್ ಉದ್ದದ, 32 ಆಸನಗಳ ಸುಸಜ್ಜಿತ ಎಲೆಕ್ಟ್ರಿಕ್ ಬಸ್ಸನ್ನು ಖರೀದಿಸಲಾಗಿದೆ. ವಿಶೇಷವೆಂದರೆ, ನ್ಯೂಟನ್ ಆಟೋ ಸಂಸ್ಥೆ ತಯಾರಿಸಿದ ಮೊದಲ ಇ-ಬಸ್ ಇದಾಗಿದ್ದು, ಮಂಗಳೂರಿನ ರಸ್ತೆಗಳಲ್ಲಿ ತನ್ನ ಮೊದಲ ಪಯಣ ಆರಂಭಿಸುತ್ತಿರುವುದು ವಿಶೇಷವಾಗಿದೆ. ಈ ಕುರಿತು ಮಾಹಿತಿ ನೀಡಿರುವ ದಿಲ್‌ರಾಜ್ ಆಳ್ವ ಅವರು, ಸದ್ಯ ನೋಂದಣಿ ಪ್ರಕ್ರಿಯೆಗಳು ಪೂರ್ಣಗೊಂಡ ಕೂಡಲೇ ಸಾರ್ವಜನಿಕ ಸೇವೆಗೆ ಬಸ್ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಈ ಇ-ಬಸ್‌ನ ತಾಂತ್ರಿಕ ಸಾಮರ್ಥ್ಯದ ಬಗ್ಗೆ ಹೇಳುವುದಾದರೆ, ಒಮ್ಮೆ ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಿದರೆ ಸುಮಾರು 200 ಕಿಲೋಮೀಟರ್‌ಗಳವರೆಗೆ ಚಲಿಸುವ ಸಾಮರ್ಥ್ಯವನ್ನು ಇದು ಹೊಂದಿದೆ. ಫಾಸ್ಟ್ ಚಾರ್ಜಿಂಗ್ ಮೂಲಕ ಕೇವಲ ಎರಡು ಗಂಟೆಗಳಲ್ಲಿ ಬ್ಯಾಟರಿಯನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಅಥವಾ ಸ್ತೋ ಚಾರ್ಜಿಂಗ್ ಮೂಲಕ ಐದು ಗಂಟೆಗಳ ಕಾಲಾವಧಿ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ಒಂದೇ ಒಂದು ಬಸ್ ಇರುವುದರಿಂದ ಪ್ರತ್ಯೇಕ ಚಾರ್ಜಿಂಗ್ ಸ್ಟೇಷನ್ ನಿರ್ಮಿಸುವ ಯೋಜನೆಯನ್ನು ಮಾಲೀಕರು ಹೊಂದಿಲ್ಲ. ಬದಲಾಗಿ ಮಂಗಳೂರು ನಗರದ ಆಯ್ದ ಪೆಟ್ರೋಲ್ ಬಂಕ್‌ಗಳಲ್ಲಿ ಲಭ್ಯವಿರುವ ಸಾರ್ವಜನಿಕ ಚಾರ್ಜಿಂಗ್ ಪಾಯಿಂಟ್‌ಗಳನ್ನೇ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಇದನ್ನೂ ಓದಿ : 👇

ಪರಿಸರ ರಕ್ಷಣೆಯ ದೃಷ್ಟಿಯಿಂದ ಈ ಬದಲಾವಣೆ ಅತ್ಯಂತ ಮಹತ್ವದ್ದಾಗಿದೆ. ಸದ್ಯಕ್ಕೆ ಗಣೇಶ್ ಪ್ರಸಾದ್ ಟ್ರಾವೆಲ್ಸ್ ಒಟ್ಟು ಐದು ಬಸ್‌ಗಳನ್ನು ಹೊಂದಿದ್ದು, ಪ್ರತಿಯೊಂದು ಬಸ್ ದಿನವೊಂದಕ್ಕೆ 19 ಟ್ರಿಪ್‌ಗಳನ್ನು ಮಾಡುತ್ತವೆ. ಇದರಲ್ಲಿ ಒಂದು ಹಳೆಯ ಇಂಧನ ಚಾಲಿತ ಬಸ್ಸಿನ ಜಾಗದಲ್ಲಿ ಈಗ ಹೊಸ ಎಲೆಕ್ಟ್ರಿಕ್ ಬಸ್ ಸೇವೆ ನೀಡಲಿದೆ. ಲಾಭ-ನಷ್ಟದ ಲೆಕ್ಕಾಚಾರಕ್ಕಿಂತಲೂ ಹೆಚ್ಚಾಗಿ, ಕಾರ್ಬನ್ ಹೊರಸೂಸುವಿಕೆಯನ್ನು ಕಡಿಮೆ ಮಾಡಿ ಪರಿಸರಕ್ಕೆ ತನ್ನದೇ ಆದ ಕೊಡುಗೆ ನೀಡಬೇಕು ಎನ್ನುವುದು ದಿಲ್‌ರಾಜ್ ಆಳ್ವ ಅವರ ಮುಖ್ಯ ಉದ್ದೇಶವಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ತಮ್ಮ ಎಲ್ಲಾ ಬಸ್‌ಗಳನ್ನು ಎಲೆಕ್ಟ್ರಿಕ್ ಆಗಿ ಬದಲಿಸುವ ಗುರಿಯನ್ನು ಅವರು ಹೊಂದಿದ್ದಾರೆ. ಇದಕ್ಕಾಗಿ ಸಮಾನ ಮನಸ್ಕರೊಂದಿಗೆ ಸೇರಿ ‘ಚಾರ್ಜ್ ಮೊಬಿಲಿಟಿ ಪ್ರೈವೇಟ್ ಲಿಮಿಟೆಡ್’ ಎಂಬ ಕಂಪನಿಯನ್ನು ಆರಂಭಿಸಿದ್ದು, ಭವಿಷ್ಯದಲ್ಲಿ ನಗರದ ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣ ಹಸಿರುಮಯವಾಗಿಸುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ.

ಇದನ್ನೂ ಓದಿ : 👇

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

16 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

16 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

19 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

20 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

20 hours ago