Featured

ಮಂಗಳೂರು:  ಫೆ.8 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ – vishwanews24

ಮಂಗಳೂರು:  ಫೆ.8 ರಂದು ಮೀನು ಮಾರಾಟ ಫೆಡರೇಶನ್ ವತಿಯಿಂದ ₹ 25ಲಕ್ಷ ಮೊತ್ತದ ಪ್ರತಿಭಾ ಪುರಸ್ಕಾರ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಎಸ್. ಎಸ್. ಎಲ್.ಸಿ., ದ್ವಿತೀಯ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ವಿಭಾಗದ 1050 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸುಮಾರು ₹25 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮವನ್ನು ಫೆಬ್ರವರಿ 8 ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನ ಸಭಾಂಗಣದಲ್ಲಿ ಆಯೋಜಿಸಿರುವುದಾಗಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.

ಸಮಾರಂಭದ ಉದ್ಘಾಟನೆಯನ್ನು ಕರಾವಳಿ ಕಾವಲು ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಎಚ್. ನೆರವೇರಿಸಲಿದ್ದು, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ನಗರ ಸಭಾ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಕೆ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಾಲ ಸಿ. ಬಂಗೇರ, ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಪ್ರೊ. ಶ್ರೀಮತಿ ನಿಕೇತನ ರವರು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಫೆಬ್ರವರಿ 15 ರಂದು ಮಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪ್ರಕಟಣೆಯಲ್ಲಿ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

35 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

48 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago