Featured

ಮಂಗಳೂರು: ಬಂದರ್ ನಲ್ಲಿ ಮೀನುಗಾರನನ್ನು ತಲೆಕೆಳಗೆ ತೂಗು ಹಾಕಿ ಹಲ್ಲೆ ಪ್ರಕರಣ  : ಆರು ಮಂದಿಯ ಬಂಧನ – Vishwanews24

ಮಂಗಳೂರು: ಬಂದರ್ ನಲ್ಲಿ ಮೀನುಗಾರನನ್ನು ತಲೆಕೆಳಗೆ ತೂಗು ಹಾಕಿ ಹಲ್ಲೆ ಪ್ರಕರಣ  : ಆರು ಮಂದಿಯ ಬಂಧನ – Vishwanews24

ಮಂಗಳೂರು: ನಗರದ ಬಂದರ್‌‌ನಲ್ಲಿ ಮೀನುಗಾರನೊಬ್ಬನನ್ನು ಬೋಟ್‌‌ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರನ್ನು ಕೊಂಡೂರು ಪೋಲಯ್ಯ (23), ಅವುಲ ರಾಜ್‌ ಕುಮಾರ್‌ (26), ಕಾಟಂಗೇರಿ ಮನೋಹರ್‌‌ (21), ವೂಟುಕೋರಿ ಜಾಲಯ್ಯ (30), ಕರಪಿಂಗಾರ ರವಿ (27) ಹಾಗೂ ಪ್ರಲಯಕಾವೇರಿ ಗೋವಿಂದಯ್ಯ (47) ಎಂದು ಗುರುತಿಸಲಾಗಿದ್ದು, ಎಲ್ಲಾ ಆರೋಪಿಗಳು ಆಂಧ್ರಪ್ರದೇಶದವರು ಎನ್ನಲಾಗಿದೆ.

ದಕ್ಕೆಯಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿರುವ ಆಂಧ್ರಪ್ರದೇಶದ ಕಾಟಮ್ವಾರಿ ಪಾಲೆಮ್‌‌‌ ನಿವಾಸಿ ವೈಲ ಶೀನು (32) ಎಂಬಾತ ದಕ್ಕೆಯಲ್ಲಿ ನಿಲ್ಲಿಸಿದ್ದ ಜಾನ್‌‌‌ ಶೈಲೇಶ್‌‌‌ 2 ಎನ್ನುವ ಬೋಟಿಗೆ ಹೋಗಿ ವಾಪಾಸ್ಸು ತಾನು ಕೆಲಸ ಮಾಡುವ ಬೋಟಿಗೆ ಬಂದು ಮಲಗಿದ್ದಾನೆ. ಡಿ.15ರಂದು ಜಾನ್‌‌‌ ಶೈಲೇಶ್‌‌‌ 2 ಬೋಟ್‌ನಲ್ಲಿ ಕೆಲಸ ಮಾಡುತ್ತಿರುವ ಆಂಧ್ರ ಪ್ರದೇಶದ ಕರಪಿಂಗಾರ ರವಿ, ಕೊಂಡೂರು ಪೋಲಯ್ಯ, ಅವುಲ ರಾಜ್‌ ಕುಮಾರ್‌, ಕಾಟಂಗೇರಿ ಮನೋಹರ್‌‌, ವೂಟುಕೋರಿ ಜಾಲಯ್ಯ, ಹಾಗೂ ಪ್ರಲಯಕಾವೇರಿ ಗೋವಿಂದಯ್ಯ ವೈಲ ಶೀಲ ಇದ್ದಲ್ಲಿಗೆ ಬಂದು ರಾತ್ರಿ ಬೋ‌ಟ್‌ಗೆ ಬಂದವನು ಮೊಬೈಲ್‌ ಕಳ್ಳತನ ಮಾಡಿದ್ದೀಯಾ ಎಂದು ಹೇಳಿ ವೈಲ ಶೀನು ಅನ್ನು ಅಪಹರಿಸಿ ಜಾನ್‌‌‌ ಶೈಲೇಶ್‌‌‌ 2 ಬೋಟ್‌ಗೆ ಕರೆದುಕೊಂಡು ಹೋಗಿ ಆತನ ಕಾಲುಗಳನ್ನು ಹಗ್ಗದಿಂದ ಕಟ್ಟಿ ಬಳಿಕ ಕಾಲಿಗೆ ಕಟ್ಟಿದ ಹಗ್ಗವನ್ನು ಬೋಟ್‌‌‌‌‌ನ ಕ್ರೇನ್‌‌ಗೆ ಸಿ‌ಕ್ಕಿಸಿ ತಲೆಕೆಳಗಾಗಿ ತೂಗು ಹಾಕಿ ಮರದ ರೀಪಿನಿಂದ ಹಾಗೂ ಕಬ್ಬಿಣದ ಸರಪಳಿಯಿಂದ ಹಲ್ಲೆ ನಡೆಸಿ, ಕೊಲೆ ನಡೆಸಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ದಕ್ಕೆ ಬಳಿಯಿಂದ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಉಪಯೋಗಿಸಿದ ಮರದ ರೀಪು, ಕಬ್ಬಿಣದ ಸರಪಳಿ, ಹಗ್ಗ ಹಾಗೂ ಮೊಬೈಲ್‌ ಹ್ಯಾಂಡ್ ಸೆಟ್‌‌‌ ಅನ್ನು ವಶಪಡಿಸಿಕೊಂಡಿದ್ಧಾರೆ.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

2 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

2 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

2 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

2 days ago