ಮಂಗಳೂರು: ದ.ಕ.ಜಿಲ್ಲೆಯಲ್ಲಿ ಜೂ.29ರಂದು ನಡೆಯುವ ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭ ಜಾನುವಾರುಗಳನ್ನು ಅನಧಿಕೃತವಾಗಿ ವಧೆ ಮಾಡುವ ಮತ್ತು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವುದನ್ನು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಯಿತು.
ಎಲ್ಲಾ ಇಲಾಖೆಗಳ ಸಮನ್ವಯ ಸಾಧಿಸಿ ಮುಂಬರುವ ಬಕ್ರೀದ್ ಹಬ್ಬದ ಸಂಧರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಅನಧಿಕೃತ ಜಾನುವಾರು ಸಾಗಾಣಿಕೆ ಕಂಡುಬಂದಲ್ಲಿ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಮತ್ತು ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಜಾನುವಾರು ಸಾಗಾಣಿಕೆ ಪರವಾನಿಗೆ ಅನ್ ಲೈನ್ ತಂತ್ರಾಂಶದ ಮಾಹಿತಿಯನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಂಡು ಅನಧಿಕೃತ ಜಾನುವಾರು ಸಾಗಾಣಿಕೆ ತಡೆಗಟ್ಟಲು ಸೂಚಿಸಿದರು.
ಸಭೆಯಲ್ಲಿ ಪೊಲೀಸ್ ಉಪಾಯುಕ್ತ ಅಂಶುಕುಮಾರ್, ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ರವಿಕುಮಾರ್ ಎಂ, ದ.ಕ.ಜಿಪಂ ಉಪ ಕಾರ್ಯದರ್ಶಿ ಕೆ. ಆನಂದ ಕುಮಾರ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಅರುಣ್ ಕುಮಾರ್ ಶೆಟ್ಟಿ ಎನ್., ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಡಾ. ರವಿ ಡಿ.ಆರ್ ಮತ್ತಿತರರು ಉಪಸ್ಥಿತರಿದ್ದರು.
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಉಡುಪಿ: ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ! ಉಡುಪಿ: ಮಾಜಿ ಸಚಿವ ಮತ್ತು ಬಿಜೆಪಿ…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…