ಮಂಗಳೂರು; ಮಂಗಳೂರು ನಗರದ ಮೂರು ದೈವಸ್ಥಾನಗಳ ಕಾಣಿಕೆ ಡಬ್ಬಿಗಳಲ್ಲಿ ಹಿಂದೂ ದೇವರ ಕುರಿತಂತೆ ಅವಹೇಳನಕಾರಿಯಾಗಿ ಬರೆದು ಹಾಕಿ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ.
ಮಂಗಳೂರು ನಗರದ ಬಾಬುಗಡ್ಡೆಯಲ್ಲಿರುವ ಭಗವಾನ್ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಇದರ ಕಾಣಿಕೆ ಡಬ್ಬಿಗೆ ಯಾರೋ ಕಿಡಿಗೇಡಿಗಳು 2೦೦ ರೂ ಖೋಟಾನೋಟಿನಲ್ಲಿ ಅಸಭ್ಯವಾಗಿ ಬರಹ ಬರೆದು ಮತ್ತು ಬಳಸಿದ ಕಾಂಡೋಮ್ನ್ನು ಹಾಕಿದ ಘಟನೆ ನಡೆದಿದೆ.
ಕಳೆದ ಗುರುವಾರ ದೈವಸ್ಥಾನದ ಕಾಣಿಕೆ ಡಬ್ಬಿ ತೆರೆಯುವ ವೇಳೆ ಈ ಬರಹವುಳ್ಳ ನೋಟು ಮತ್ತು ಚೀಟಿ ಪತ್ತೆಯಾಗಿದೆ. ಇದರಲ್ಲಿ ಪ್ರಚೋದನಕಾರಿ ಬರಹಗಳನ್ನು ನೋಟಿನಲ್ಲಿ ಬರೆಯಲಾಗಿದೆ. ನೋಟಿನ ಗಾಂಧೀಜಿ ಚಿತ್ರವನ್ನೂ ವಿರೂಪ ಮಾಡಲಾಗಿದೆ.
ಇಲ್ಲಿಗೆ ಸಮೀಪದ ಇನ್ನೊಂದು ದೈವಸ್ಥಾನದ ಕಾಣಿಕೆ ಹುಂಡಿಯಲ್ಲೂ ಇದೇ ರೀತಿಯ ಅವಹೇಳನಕಾರಿ ಬರಹಗಳನ್ನು ಹಾಕಲಾಗಿದೆ. ದೇವಸ್ಥಾನ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಾರ್ಥನೆ: ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಶುಕ್ರವಾರ ರಾತ್ರಿ ಊರ ಭಕ್ತಾದಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ನಗರ ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ, ಭರತ್ ಕುಮಾರ್ ಎಸ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರತೀಂದ್ರನಾಥ್ ಎಚ್, ಅಖಿಲ ಭಾರತ ಮುಂಡಾಲ ಯುವ ವೇದಿಕೆ, ವಿಶ್ವಹಿಂದು ಪರಿಷತ್, ಬಜರಂಗದಳ ಅತ್ತಾವರ ಚಕ್ರಪಾಣಿ ಶಾಖೆ ಮತ್ತು ಛತ್ರಪತಿ ಶಾಖೆ ಬಾಬುಗುಡ್ಡ ಶಾಖೆ ಸದಸ್ಯರುಗಳು ಉಪಸ್ಥಿತರಿದ್ದರು.
http://ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು :ಹೆಚ್.ಡಿ.ಕುಮಾರಸ್ವಾಮಿ -Vishwanews24
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…