Featured

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ – vishwanews24

ಮಂಗಳೂರು : ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ; ಮುಂದಿನ ವಾರದಿಂದ ದಂಡ

ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್‌ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, ಈ ವಾರಾಂತ್ಯದವರೆಗೆ ಮುಂದುವರಿಯಲಿದೆ.

ಮಂಗಳೂರಿನ ಸಹಾಯಕ ಸಾರಿಗೆ ಅಧಿಕಾರಿ (ಎಆರ್‌ಟಿಒ) ವಿಶ್ವನಾಥ್ ನಾಯ್ಕ್ ನೇತೃತ್ವದಲ್ಲಿ ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭಗೊಂಡಿತು.

‘ಬಸ್‌ಗಳ ರೂಂಗಳನ್ನು ಕನ್ನಡದಲ್ಲಿ ನಮೂದಿಸಬೇಕಾಗಿದೆ. ಈ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಕೆಲವು ಬಸ್‌ ನಬರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ಈ ವಾರಾಂತ್ಯದವರೆಗೆ ಖಾಸಗಿ ಬಸ್ಸುಗಳವರಿಂದಲೇ ಹಣ ಭರಿಸಿಕೊಂಡು ಕನ್ನಡ ನಾಮಫಲಕದ ಸ್ಟಿಕರ್ ಅಳವಡಿಕೆ ಕಾರ್ಯ ನಡೆಯಲಿದೆ. ಮುಂದಿನ ವಾರದಿಂದ ದಂಡ ವಿಧಿಸುವ ಕಾರ್ಯ ನಡೆಯಲಿದೆ’ ಎಂದು ಎಆರ್‌ಟಿಒ ವಿಶ್ವನಾಥ್ ನಾಯ್ಕ್ ತಿಳಿಸಿದರು.

ಬಸ್ಸುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದರೂ ಬಹುತೇಕ ಖಾಸಗಿ ಬಸ್ಸುಗಳವರು ಇದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ನಿರಂತರವಾಗಿ ಸಂಬಂಧಪಟ್ಟವರಿಗೆ ದೂರು ನೀಡಲಾಗುತ್ತಿದೆ. ಇದೀಗ ಆರ್‌ಟಿಒ ಮೂಲಕ ಈ ಕಾರ್ಯ ಆರಂಭಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿ.ಕೆ. ಭಟ್ ಅಭಿಪ್ರಾಯಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago