ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, ಈ ವಾರಾಂತ್ಯದವರೆಗೆ ಮುಂದುವರಿಯಲಿದೆ.
ಮಂಗಳೂರಿನ ಸಹಾಯಕ ಸಾರಿಗೆ ಅಧಿಕಾರಿ (ಎಆರ್ಟಿಒ) ವಿಶ್ವನಾಥ್ ನಾಯ್ಕ್ ನೇತೃತ್ವದಲ್ಲಿ ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭಗೊಂಡಿತು.
‘ಬಸ್ಗಳ ರೂಂಗಳನ್ನು ಕನ್ನಡದಲ್ಲಿ ನಮೂದಿಸಬೇಕಾಗಿದೆ. ಈ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಕೆಲವು ಬಸ್ ನಬರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ಈ ವಾರಾಂತ್ಯದವರೆಗೆ ಖಾಸಗಿ ಬಸ್ಸುಗಳವರಿಂದಲೇ ಹಣ ಭರಿಸಿಕೊಂಡು ಕನ್ನಡ ನಾಮಫಲಕದ ಸ್ಟಿಕರ್ ಅಳವಡಿಕೆ ಕಾರ್ಯ ನಡೆಯಲಿದೆ. ಮುಂದಿನ ವಾರದಿಂದ ದಂಡ ವಿಧಿಸುವ ಕಾರ್ಯ ನಡೆಯಲಿದೆ’ ಎಂದು ಎಆರ್ಟಿಒ ವಿಶ್ವನಾಥ್ ನಾಯ್ಕ್ ತಿಳಿಸಿದರು.
ಬಸ್ಸುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದರೂ ಬಹುತೇಕ ಖಾಸಗಿ ಬಸ್ಸುಗಳವರು ಇದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ನಿರಂತರವಾಗಿ ಸಂಬಂಧಪಟ್ಟವರಿಗೆ ದೂರು ನೀಡಲಾಗುತ್ತಿದೆ. ಇದೀಗ ಆರ್ಟಿಒ ಮೂಲಕ ಈ ಕಾರ್ಯ ಆರಂಭಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿ.ಕೆ. ಭಟ್ ಅಭಿಪ್ರಾಯಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…