ಮಂಗಳೂರು : ನಗರದಿಂದ ವಿವಿಧ ಜಿಲ್ಲೆ, ತಾಲೂಕುಗಳಿಗೆ ಹೊರಡುವ ವೇಗದೂತ, ಸರ್ವಿಸ್ ಸೇರಿದಂತೆ ಖಾಸಗಿ ಬಸ್ಸುಗಳ ರೂಟ್ಗಳ ಕನ್ನಡ ನಾಮಫಲಕ ಸ್ಟಿಕರ್ ಅಭಿಯಾನ ಮಂಗಳವಾರ ಆರಂಭಗೊಂಡಿದ್ದು, ಈ ವಾರಾಂತ್ಯದವರೆಗೆ ಮುಂದುವರಿಯಲಿದೆ.
ಮಂಗಳೂರಿನ ಸಹಾಯಕ ಸಾರಿಗೆ ಅಧಿಕಾರಿ (ಎಆರ್ಟಿಒ) ವಿಶ್ವನಾಥ್ ನಾಯ್ಕ್ ನೇತೃತ್ವದಲ್ಲಿ ನಗರದ ಸರ್ವಿಸ್ ಬಸ್ಸು ನಿಲ್ದಾಣದಲ್ಲಿ ಬಸ್ಸುಗಳಿಗೆ ಕನ್ನಡ ನಾಮಫಲಕ ಸ್ಟಿಕರ್ ಅಳವಡಿಕೆ ಅಭಿಯಾನ ಆರಂಭಗೊಂಡಿತು.
‘ಬಸ್ಗಳ ರೂಂಗಳನ್ನು ಕನ್ನಡದಲ್ಲಿ ನಮೂದಿಸಬೇಕಾಗಿದೆ. ಈ ಬಗ್ಗೆ ಪರಿಶೀಲನೆಯನ್ನು ನಡೆಸಲಾಗುತ್ತದೆ. ಕೆಲವು ಬಸ್ ನಬರು ಈ ನಿಯಮವನ್ನು ಪಾಲಿಸುತ್ತಿಲ್ಲ. ಇದೀಗ ಈ ವಾರಾಂತ್ಯದವರೆಗೆ ಖಾಸಗಿ ಬಸ್ಸುಗಳವರಿಂದಲೇ ಹಣ ಭರಿಸಿಕೊಂಡು ಕನ್ನಡ ನಾಮಫಲಕದ ಸ್ಟಿಕರ್ ಅಳವಡಿಕೆ ಕಾರ್ಯ ನಡೆಯಲಿದೆ. ಮುಂದಿನ ವಾರದಿಂದ ದಂಡ ವಿಧಿಸುವ ಕಾರ್ಯ ನಡೆಯಲಿದೆ’ ಎಂದು ಎಆರ್ಟಿಒ ವಿಶ್ವನಾಥ್ ನಾಯ್ಕ್ ತಿಳಿಸಿದರು.
ಬಸ್ಸುಗಳಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸಲಾಗಿದ್ದರೂ ಬಹುತೇಕ ಖಾಸಗಿ ಬಸ್ಸುಗಳವರು ಇದನ್ನು ಪಾಲಿಸುತ್ತಿಲ್ಲ. ಈ ಬಗ್ಗೆ ನಿರಂತರವಾಗಿ ಸಂಬಂಧಪಟ್ಟವರಿಗೆ ದೂರು ನೀಡಲಾಗುತ್ತಿದೆ. ಇದೀಗ ಆರ್ಟಿಒ ಮೂಲಕ ಈ ಕಾರ್ಯ ಆರಂಭಗೊಂಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿ.ಕೆ. ಭಟ್ ಅಭಿಪ್ರಾಯಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…