ಮಂಗಳೂರು: ಇಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ.
ಗುರುವಾರ ರಾತ್ರಿ ನಗರದ ಪಂಪ್ವೆಲ್ ಬಳಿ ಈ ಘಟನೆ ನಡೆದಿದೆ. ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ ಹಲ್ಲೆಗೆ ಒಳಗಾದವರು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ. ರಾತ್ರಿ ಸುಮಾರು 9.30ಕ್ಕೆ ಬಸ್ ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24
ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಒಂದು ವಾರದಲ್ಲಿ ಜಿಲ್ಲೆಯ ಸುರತ್ಕಲ್, ಬಂಟ್ವಾಳ, ಪಂಪ್ವೆಲ್ ಬಳಿ ಇಂತಹ ಘಟನೆಗಳು ನಡೆದಿವೆ.
ಬಂಧನಕ್ಕೆ ಕ್ರಮ: ನಗರದ ಪಂಪ್ವೆಲ್ ಬಳಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…