ಮಂಗಳೂರು: ಇಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ.
ಗುರುವಾರ ರಾತ್ರಿ ನಗರದ ಪಂಪ್ವೆಲ್ ಬಳಿ ಈ ಘಟನೆ ನಡೆದಿದೆ. ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ ಹಲ್ಲೆಗೆ ಒಳಗಾದವರು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ. ರಾತ್ರಿ ಸುಮಾರು 9.30ಕ್ಕೆ ಬಸ್ ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ : ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ -Vishwanews24
ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಒಂದು ವಾರದಲ್ಲಿ ಜಿಲ್ಲೆಯ ಸುರತ್ಕಲ್, ಬಂಟ್ವಾಳ, ಪಂಪ್ವೆಲ್ ಬಳಿ ಇಂತಹ ಘಟನೆಗಳು ನಡೆದಿವೆ.
ಬಂಧನಕ್ಕೆ ಕ್ರಮ: ನಗರದ ಪಂಪ್ವೆಲ್ ಬಳಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ದ. ಕ.ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಸ್.ಆರ್.ಭಗವಾನ್ ಅಧಿಕಾರ ಸ್ವೀಕಾರ -Vishwanews24
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…