ಮಂಗಳೂರು: ನಗರದ ಸಿಟಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲೇ ಕುಳಿತ ವ್ಯಕ್ತಿಯೊಬ್ಬ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನಾದ್ಯಂತ ಭಾರೀ ಸುದ್ದಿಯಾಗಿತ್ತು, ಮಹಿಳೆಯರ ಸುರಕ್ಷತೆ ಬಗ್ಗೆ ಚರ್ಚೆಯಾಗಿತ್ತು. ಇದೀಗ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎರಡು ದಿನ ಕಳೆಯೊದರೊಳಗೆ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಕಾಸರಗೋಡಿನ ಪೆರ್ಲ ನಿವಾಸಿ ಹುಸೈನ್ (41) ಬಂಧಿತ ಆರೋಪಿ. ಇದೇ 14 ರಂದು ಖಾಸಗಿ ಬಸ್ನಲ್ಲಿ ಮಂಗಳೂರಿನ ಪಂಪ್ವೆಲ್ನತ್ತ ಮಹೇಶ್ ಬಸ್ನಲ್ಲಿ ಯುವತಿ ಪ್ರಯಾಣಿಸುತ್ತಿದ್ದ ವೇಳೆ, ದೇರಳಕಟ್ಟೆಯಿಂದ ಬಸ್ ಹತ್ತಿದ್ದ ಹುಸೇನ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆಕೆಯ ಮೈ ಮುಟ್ಟುವ ಪ್ರಯತ್ನ ನಡೆಸಿದ್ದಾನೆ. ಕೂಡಲೇ ಯುವತಿ ಧೈರ್ಯ ತೋರಿ ಆತನಿಗೆ ಬೈದು ಬೇರೆ ಸೀಟಿನತ್ತ ಕಳುಹಿಸಿದ್ದಾಳೆ.
ಆದರೆ ಬೇರೆ ಬಸ್ನಿಂದ ಮತ್ತೆ ಇಳಿದು ಯುವತಿ ಇದ್ದ ಬಸ್ ಏರಿ ಮತ್ತೆ ಆಕೆಯ ಬಳಿ ಕುಳಿತು ಲೈಂಗಿಕ ಕಿರುಕುಳ ನೀಡಿದ್ದಾನೆ. ಇದರಿಂದ ಕೋಪಗೊಂಡ ಯುವತಿ ಈ ರೀತಿ ಯಾರಿಗೂ ಆಗಬಾರದು ಎನ್ನುವ ನಿಟ್ಟಿನಲ್ಲಿ ಇನ್ಸ್ಟಾಗ್ರಾಂನಲ್ಲಿ ಆತನ ಫೋಟೊ ಹಾಕಿ ತನ್ನ ನೋವು ತೋಡಿಕೊಂಡಿದ್ದಳು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಈ ಸಂಬಂಧ ತಂಡ ರಚಿಸಿದ ಪೊಲೀಸರು ಆರೋಪಿ ಹುಸೈನ್ನನ್ನು ಬಂಧಿಸಿದ್ದಾರೆ.
ಪೊಲೀಸರೆದುರೇ ಯುವತಿಯಿಂದ ಕಪಾಳಮೋಕ್ಷ
ಬಸ್ ಪ್ರಯಾಣದಲ್ಲಿ ಕಿರುಕುಳ ನೀಡಿದ್ದ ವ್ಯಕ್ತಿಗೆ, ನಗರದಲ್ಲಿನ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲೇ ನೊಂದ ಯುವತಿಯು ಕಪಾಳಮೋಕ್ಷ ಮಾಡಿದ ಘಟನೆ ಗುರುವಾರ ನಡೆದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಗುರುವಾರ ಕಮಿಷನರೇಟ್ ಕಚೇರಿಗೆ ಕರೆದುಕೊಂಡು ಬಂದಿದ್ದರು. ಘಟನೆಯಿಂದ ನೊಂದಿದ್ದ ಯುವತಿಗೆ, ಆತನ ಮುಖ ನೋಡುತ್ತಲೇ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಪೊಲೀಸರೆದುರೇ ಹುಸೈನ್ಗೆ ಯುವತಿ ಕಪಾಳಮೋಕ್ಷ ಮಾಡಿದ್ದಾಳೆ.
ಎಲ್ಲ ಯುವತಿಯರು, ಮಹಿಳೆಯರಿಗೆ ಧೈರ್ಯ, ವಿಶ್ವಾಸ ಮೂಡಿಸುವ ಕಾರ್ಯ ಮಾಡಿದ್ದಾರೆ’ ಎಂದರು. ಪ್ರಕರಣ ಭೇದಿಸಿದ ತಂಡಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ₹10 ಸಾವಿರ ಬಹುಮಾನ ನೀಡಿದರು. ಕಮಿಷನರ್ ಹಾಗೂ ಡಿಸಿಪಿ ಹರಿರಾಂ ಶಂಕರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…