ಮಂಗಳೂರು: ನಗರದಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದ ವಿಭಿನ್ನ ಕೋಮಿನ ಯುವಕ ಯುವತಿಯ ಮೇಲೆ ಹಲ್ಲೆ ನಡೆಸಲಾಗಿದ್ದು, ಯುವಕನಿಗೆ ಹರಿತ ಆಯುಧದಿಂದ ಗಾಯಗೊಳಿಸಿದ ಘಟನೆ ನಗರದ ಪಂಪ್ ವೆಲ್ ನಲ್ಲಿ ಗುರುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಗಾಯಗೊಂಡಿರುವ ಮಹಮ್ಮದ್ ಹರ್ಷಿದ್ ಅನ್ವರ್ (23 ವ) ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಘಟನೆಗೆ ಸಂಬಂಧಿಸಿದಂತೆ ಸುಮಾರು ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಗುರುವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಖಾಸಗಿ ಬಸ್ ನಲ್ಲಿ ಹೋಗುತ್ತಿದ್ದ ಯುವಕ- ಯುವತಿಯನ್ನು ತಡೆದು ಹಲ್ಲೆ ನಡೆಸಲಾಗಿತ್ತು. ಯುವಕ ತನಗೆ ಬೆಂಗಳೂರಿನಲ್ಲಿ ಉದ್ಯೋಗ ಹುಡುಕಲು ಸಹಾಯ ಮಾಡಲು ಬಂದಿದ್ದ ಎಂಬುದಾಗಿ ಯುವತಿ ತಿಳಿಸಿದ್ದಾಳೆ ಎಂದು ಆಯುಕ್ತರು ಹೇಳಿದ್ದಾರೆ.
ಕರಾವಳಿಗೆ ಹೆಚ್ಚಿನ ಭದ್ರತೆ : ಕೋಸ್ಟ್ ಗಾರ್ಡ್ಗೆ 2 ಫಾಸ್ಟ್ ಪ್ಯಾಟ್ರೋಲ್ ಹಡಗುಗಳು ಸೇರ್ಪಡೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…