ಮಂಗಳೂರು: ಬಸ್ ನಲ್ಲಿ ಮಹಿಳೆಗೆ ಹೃದಯಾಘಾತ- ಜೀವ ರಕ್ಷಕರಾದ ಬಸ್ ಚಾಲಕ ಹಾಗೂ ನಿರ್ವಾಹಕ -Vishwanews24

ಮಂಗಳೂರು: ಬಸ್ ನಲ್ಲಿ ಮಹಿಳೆಗೆ ಹೃದಯಾಘಾತ- ಜೀವ ರಕ್ಷಕರಾದ ಬಸ್ ಚಾಲಕ ,ನಿರ್ವಾಹಕ -Vishwanews24

ಮಂಗಳೂರು : ತಲಪಾಡಿ ಕಿನ್ಯಾದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮಹಿಳೆಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಬಸ್ ಚಾಲಕರು ಜಾಗೃತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ಸನ್ನು ಯಾವುದೇ ನಿಲ್ದಾಣಗಳಲ್ಲಿ ನಿಲ್ಲಿಸದೆ ನೇರವಾಗಿ ಖಾಸಗಿ ಆಸ್ಪತ್ರೆಗೆ ತಂದು ಮಹಿಳೆಗೆ ಜೀವದಾನ ನೀಡಿದ್ದಾರೆ..

ಕರಾವಳಿ ಶ್ರಮಿಕ ಸಂಘ ಖಾಸಗಿ ಬಸ್ ಚಾಲಕರ ಹಾಗೂ ನಿರ್ವಾಹಕರ ಸಂಘದ ಸದಸ್ಯರಾಗಿರುವ ಹಾಗೂ ಮಹೇಶ್ ಬಸ್ಸಿನ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್ ಇವರ ಮಾನವೀಯತೆಗೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಬಸ್ ಸಿಬ್ಬಂದಿಯನ್ನು ಕಂಡಾಗ ಮೂಗು ಮುರಿಯುವವರಿಗೆ ಅವರೊಳಗಿನ ಮಾನವೀಯ ಮೌಲ್ಯಗಳನ್ನು ಪರಿಚಯಿಸಿಕೊಟ್ಟ ಪ್ರಮೋದ್ ಹಾಗೂ ಅಶ್ವಿತ್ ಅವರಿಗೆ ಧನ್ಯವಾದಗಳು..

ಬೆಳಿಗ್ಗೆ 10.30ಕ್ಕೆ ಕಿನ್ಯಾದಿಂದ ತೆರಳುವ ಬಸ್ಸಿನಲ್ಲಿ ಮೀನಾದಿ ನಿವಾಸಿ ಭಾಗ್ಯ(50) ಎಂಬ ಮಹಿಳೆ, ಇನ್ನೋರ್ವ ಮಹಿಳೆ ಜೊತೆಗೆ ಬಸ್ಸನ್ನೇರಿದ್ದರು. ಸೀಟಿನಲ್ಲಿ ಕುಳಿತಿದ್ದ ಭಾಗ್ಯ ಅವರು ಬಸ್ಸು ಕೆ.ಸಿ ರೋಡು ತಲುಪುತ್ತಿದ್ದಂತೆ ಎದೆನೋವು ಎಂದು ಬೊಬ್ಬೆ ಹಾಕಲು ಆರಂಭಿಸಿದರು. ಇದನ್ನು ಗಮನಿಸಿದ ಸಿಬ್ಬಂದಿ ಬಸ್ಸಿನಲ್ಲಿ ಪ್ರಯಾಣಿಕರಿದ್ದರೂ, ಎಲ್ಲಿಯೂ ನಿಲ್ಲಿಸದೆ ಸುಮಾರು 3 ಕಿ.ಮೀ ಉದ್ದಕ್ಕೆ ಬಸ್ಸು ಚಲಾಯಿಸಿ ಕೋಟೆಕಾರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಭಾಗ್ಯ ಅವರು ಜತೆಗಿದ್ದ ಮಹಿಳೆ ಜೊತೆಗೆ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಹೊರರೋಗಿಯಾಗಿ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಾಗಿ ಮಹೇಶ್ ಬಸ್ಸು ಕಂಪೆನಿ ಪ್ರಬಂಧಕ ರಂಜಿತ್ ತಿಳಿಸಿದ್ದಾರೆ. ಶ್ರಮಿಕ ಸಂಘದ ಸದಸ್ಯರಾಗಿರುವ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆ ಹಾಗೂ ಮಾನವೀಯತೆಯ ಗುಣಗಳನ್ನು ಸಂಘ ಹಾಗೂ ಬಸ್ಸು ಮಾಲೀಕ ಪ್ರಕಾಶ್ ಶೇಖ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

5 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

5 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

6 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

6 hours ago