ಮಂಗಳೂರು : ತಲಪಾಡಿ ಕಿನ್ಯಾದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ಮಹಿಳೆಯೊಬ್ಬರಿಗೆ ಎದೆ ನೋವು ಕಾಣಿಸಿಕೊಂಡ ತಕ್ಷಣ ಬಸ್ ಚಾಲಕರು ಜಾಗೃತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕರು ಬಸ್ಸನ್ನು ಯಾವುದೇ ನಿಲ್ದಾಣಗಳಲ್ಲಿ ನಿಲ್ಲಿಸದೆ ನೇರವಾಗಿ ಖಾಸಗಿ ಆಸ್ಪತ್ರೆಗೆ ತಂದು ಮಹಿಳೆಗೆ ಜೀವದಾನ ನೀಡಿದ್ದಾರೆ..
ಕರಾವಳಿ ಶ್ರಮಿಕ ಸಂಘ ಖಾಸಗಿ ಬಸ್ ಚಾಲಕರ ಹಾಗೂ ನಿರ್ವಾಹಕರ ಸಂಘದ ಸದಸ್ಯರಾಗಿರುವ ಹಾಗೂ ಮಹೇಶ್ ಬಸ್ಸಿನ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕ ಪ್ರಮೋದ್ ಹಾಗೂ ನಿರ್ವಾಹಕ ಅಶ್ವಿತ್ ಇವರ ಮಾನವೀಯತೆಗೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಬಸ್ ಸಿಬ್ಬಂದಿಯನ್ನು ಕಂಡಾಗ ಮೂಗು ಮುರಿಯುವವರಿಗೆ ಅವರೊಳಗಿನ ಮಾನವೀಯ ಮೌಲ್ಯಗಳನ್ನು ಪರಿಚಯಿಸಿಕೊಟ್ಟ ಪ್ರಮೋದ್ ಹಾಗೂ ಅಶ್ವಿತ್ ಅವರಿಗೆ ಧನ್ಯವಾದಗಳು..
ಬೆಳಿಗ್ಗೆ 10.30ಕ್ಕೆ ಕಿನ್ಯಾದಿಂದ ತೆರಳುವ ಬಸ್ಸಿನಲ್ಲಿ ಮೀನಾದಿ ನಿವಾಸಿ ಭಾಗ್ಯ(50) ಎಂಬ ಮಹಿಳೆ, ಇನ್ನೋರ್ವ ಮಹಿಳೆ ಜೊತೆಗೆ ಬಸ್ಸನ್ನೇರಿದ್ದರು. ಸೀಟಿನಲ್ಲಿ ಕುಳಿತಿದ್ದ ಭಾಗ್ಯ ಅವರು ಬಸ್ಸು ಕೆ.ಸಿ ರೋಡು ತಲುಪುತ್ತಿದ್ದಂತೆ ಎದೆನೋವು ಎಂದು ಬೊಬ್ಬೆ ಹಾಕಲು ಆರಂಭಿಸಿದರು. ಇದನ್ನು ಗಮನಿಸಿದ ಸಿಬ್ಬಂದಿ ಬಸ್ಸಿನಲ್ಲಿ ಪ್ರಯಾಣಿಕರಿದ್ದರೂ, ಎಲ್ಲಿಯೂ ನಿಲ್ಲಿಸದೆ ಸುಮಾರು 3 ಕಿ.ಮೀ ಉದ್ದಕ್ಕೆ ಬಸ್ಸು ಚಲಾಯಿಸಿ ಕೋಟೆಕಾರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಭಾಗ್ಯ ಅವರು ಜತೆಗಿದ್ದ ಮಹಿಳೆ ಜೊತೆಗೆ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಹೊರರೋಗಿಯಾಗಿ ಮಹಿಳೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವುದಾಗಿ ಮಹೇಶ್ ಬಸ್ಸು ಕಂಪೆನಿ ಪ್ರಬಂಧಕ ರಂಜಿತ್ ತಿಳಿಸಿದ್ದಾರೆ. ಶ್ರಮಿಕ ಸಂಘದ ಸದಸ್ಯರಾಗಿರುವ ಚಾಲಕ ಹಾಗೂ ನಿರ್ವಾಹಕರ ಸಮಯಪ್ರಜ್ಞೆ ಹಾಗೂ ಮಾನವೀಯತೆಯ ಗುಣಗಳನ್ನು ಸಂಘ ಹಾಗೂ ಬಸ್ಸು ಮಾಲೀಕ ಪ್ರಕಾಶ್ ಶೇಖ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…