ಮಂಗಳೂರು: ಯುವಕರ ತಂಡವೊಂದು ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ವೇಳೆ ಕಣ್ಣೂರು ಬಳಿ ಬಸ್ ನಿಲ್ಲಿಸದ್ದಕ್ಕೆ ಎಸ್.ಕೆ.ಟ್ರಾವೆಲ್ ಹೆಸರಿನ ಬಸ್ ನಿರ್ವಾಹಕ ಯಶವಂತ್ ಮೇಲೆ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡ ನಿರ್ವಾಹಕ ಯಶವಂತ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟೈಮಿಂಗ್ ಹಿನ್ನೆಲೆ ಕಣ್ಣೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಚಾಲಕ ವಿರುದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರೋರ್ವರು ಪ್ಯಾಸೆಂಜರ್ ಒಬ್ಬನಿಂದ ಹಲ್ಲೆ ನಡೆಸಲಾಗಿದ್ದು ಆ ಬಳಿಕ ಮತ್ತೆ ಹತ್ತಾರು ಜನ ನಿರ್ವಾಹಕನ ಎಳೆದು ಹಾಕಿ ಹಲ್ಲೆ ಆರೋಪಿಸಲಾಗಿದೆ.
ಸದ್ಯ ಎರಡೂ ಕಡೆಯವರಿಂದ ಕಂಕನಾಡಿ ನಗರ ಠಾಣೆಗೆ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬುಧವಾರ ಬಸ್ ಬಂದ್ ಮಾಡಲಾಗಿದ್ದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಡ್ಯಾರ್ ಕಟ್ಟೆ ಭಾಗದಲ್ಲಿ ಜಮಾಯಿಸಿದ ಬಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಅಡ್ಯಾರ್ ಕಟ್ಟೆ ಬಳಿ ಎಸಿಪಿ ನೇತೃತ್ವದಲ್ಲಿ ಬಿಗು ಪೊಲೀಸ್ ಭದ್ರತೆ ನೀಡಲಾಗಿದ್ದು, ಸದ್ಯ ಗುಂಪು ಚದುರಿಸಿ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…