ಮಂಗಳೂರು: ಯುವಕರ ತಂಡವೊಂದು ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಮಂಗಳೂರು ಹೊರವಲಯದ ಕಣ್ಣೂರು ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಿನ್ನೆ ರಾತ್ರಿ ವೇಳೆ ಕಣ್ಣೂರು ಬಳಿ ಬಸ್ ನಿಲ್ಲಿಸದ್ದಕ್ಕೆ ಎಸ್.ಕೆ.ಟ್ರಾವೆಲ್ ಹೆಸರಿನ ಬಸ್ ನಿರ್ವಾಹಕ ಯಶವಂತ್ ಮೇಲೆ ಹಲ್ಲೆ ನಡೆದಿದ್ದು ಗಂಭೀರ ಗಾಯಗೊಂಡ ನಿರ್ವಾಹಕ ಯಶವಂತ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಟೈಮಿಂಗ್ ಹಿನ್ನೆಲೆ ಕಣ್ಣೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದ ಚಾಲಕ ವಿರುದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರೋರ್ವರು ಪ್ಯಾಸೆಂಜರ್ ಒಬ್ಬನಿಂದ ಹಲ್ಲೆ ನಡೆಸಲಾಗಿದ್ದು ಆ ಬಳಿಕ ಮತ್ತೆ ಹತ್ತಾರು ಜನ ನಿರ್ವಾಹಕನ ಎಳೆದು ಹಾಕಿ ಹಲ್ಲೆ ಆರೋಪಿಸಲಾಗಿದೆ.
ಸದ್ಯ ಎರಡೂ ಕಡೆಯವರಿಂದ ಕಂಕನಾಡಿ ನಗರ ಠಾಣೆಗೆ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬುಧವಾರ ಬಸ್ ಬಂದ್ ಮಾಡಲಾಗಿದ್ದು ಅಡ್ಯಾರ್, ಕಣ್ಣೂರು ಭಾಗದ ಸಿಟಿ ಬಸ್ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಡ್ಯಾರ್ ಕಟ್ಟೆ ಭಾಗದಲ್ಲಿ ಜಮಾಯಿಸಿದ ಬಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.
ಅಡ್ಯಾರ್ ಕಟ್ಟೆ ಬಳಿ ಎಸಿಪಿ ನೇತೃತ್ವದಲ್ಲಿ ಬಿಗು ಪೊಲೀಸ್ ಭದ್ರತೆ ನೀಡಲಾಗಿದ್ದು, ಸದ್ಯ ಗುಂಪು ಚದುರಿಸಿ ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…