ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಬ್ಬಾಳಿಕೆ ಹಾಗೂ ಧಾರ್ಮಿಕ ಮುಖಂಡನ ಬಂಧನದ ವಿರುದ್ಧ ವಿಶ್ವಹಿಂದೂ ಪರಿಷತ್ ದೇಶದಾದ್ಯಂತ ನಾಳೆ ಪ್ರತಿಭಟನೆಗೆ ಕರೆ ನೀಡಿದೆ. ನಾಳೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ, ತಾಲ್ಲೂಕುಗಳಲ್ಲಿ, ಹೋಬಳಿಗಳಲ್ಲಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಹಾಗೂ ಬಂಧನವಾಗಿರುವ ಧಾರ್ಮಿಕ ಮುಖಂಡನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಜಿಹಾದಿ ಅಂಶಗಳಿಂದ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ಕಿರುಕುಳ, ಹಿಂದೂ ದೇವಾಲಯಗಳು ಮತ್ತು ಪ್ರತಿಮೆಗಳನ್ನು ಅಪವಿತ್ರಗೊಳಿಸುವುದು ಮತ್ತು ಹಿಂದೂ ಆಸ್ತಿಗಳ ಅಪವಿತ್ರಗೊಳಿಸುವಿಕೆ ಇನ್ನೂ ಮುಂದುವರೆದಿದೆ. ಅವರನ್ನು ತಡೆಯಲು ಸರಕಾರ ಯಾವುದೇ ಗಂಭೀರ ಪ್ರಯತ್ನ ಮಾಡುತ್ತಿಲ್ಲ. ಇವುಗಳನ್ನು ವಿರೋಧಿಸಿ ಹಿಂದೂ ಸಮಾಜವು ಢಾಕಾ, ಚಿತ್ತಗಾಂಗ್ ಮೊದಲಾದ ನಗರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ಆಯೋಜಿಸಿದೆ. ವಿಶ್ವ ಸಮುದಾಯ ಮತ್ತು ಮತ್ತು ಭಾರತ ಸರ್ಕಾರ ನಿರೀಕ್ಷೆಯಂತೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ.
ಇದಕ್ಕೆ ವ್ಯತಿರಿಕ್ತವಾಗಿ ಭದ್ರತೆ ಮತ್ತು ಸಂಘಟನೆಗಾಗಿ ಹಿಂದೂ ಸಮಾಜವನ್ನು ಜಾಗೃತಗೊಳಿಸಿದ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದೆ ಮತ್ತು ಜಾಮೀನು ಸಹ ನಿರಾಕರಿಸಲಾಗಿದೆ. ಈ ಬಂಧನವನ್ನು ವಿರೋಧಿಸಿ, ಹಿಂದೂ ನಾಯಕನ ಬಿಡುಗಡೆಗೆ ಒತ್ತಾಯಿಸಿ ಹಾಗೂ ಬಾಂಗ್ಲಾ ದೇಶದ ಹಿಂದೂಗಳ ರಕ್ಷಣೆಗಾಗಿ ಆಗ್ರಹಿಸಿ ನಾಳೆ ದೇಶದಾದ್ಯಂತ ಪ್ರತಿಭಟನೆ ನಡೆಸಲು ವಿಶ್ವ ಹಿಂದೂ ಪರಿಷತ್ ನಿರ್ಧರಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…