Featured

ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ – Vishwanews24

ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳ ಪರ ವಕಾಲತ್ತು ಮಾಡಬೇಡಿ : ವಕೀಲರ ಸಂಘಕ್ಕೆ ಬಜರಂಗದಳ ಮನವಿ

ಮಂಗಳೂರು: ನಗರದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ ನೀಡಿದೆ.

ಬಜರಂಗದಳ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ನೇತೃತ್ವದ ನಿಯೋಗ ವಕೀಲರ ಸಂಘದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿದೆ. ಮೊಹಮ್ಮದ್ ಶಾರೀಕ್ ಎಂಬಾತ ನಗರದಲ್ಲಿ ಕಳೆದ ವಾರ ನಡೆಸಿದ ಬಾಂಬ್‌ ಬ್ಲಾಸ್ಟ್ ನ ಕೃತ್ಯದಿಂದ ಮಂಗಳೂರಿನ ಜನತೆ ಹೆದರಿಕೆಯಿಂದ ಸಮಾಜದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಹಲವು ಮೂಲಗಳಿಂದ ಮತ್ತು ಪತ್ರಿಕೆಗಳಲ್ಲಿನ ಮಾಹಿತಿಯಿಂದ ಶಾರೀಕ್ ಐಸಿಸ್ ನಂತಹ ಉಗ್ರ ಸಂಘಟನೆಯೊಂದಿಗೆ ಸಂಪರ್ಕವನ್ನು ಹೊಂದಿದ್ದನು ಎಂಬ ವಿಚಾರವು ನಮ್ಮ ಗಮನಕ್ಕೆ ಬಂದಿರುತ್ತದೆ.

ಇಂತಹ ಸನ್ನಿವೇಶಗಳಿಂದ ನಮ್ಮ ನಾಗರಿಕರಿಗೆ ಅಭದ್ರತೆಯ ಕೊರತೆ ಎದ್ದುಕಾಣುತ್ತಿದೆ.ಹಾಗೆಯೆ ಸಮಾಜದಲ್ಲಿನ ಶಾಂತಿಯನ್ನು ಹಾಳುಮಾಡುವ ಉದ್ದೇಶ ಮತ್ತು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದೆ ಇರುವುದು ಇಂತಹ ಕೃತ್ಯಗಳು ಮರುಕಳಿಸುವಂತಾಗಿದೆ.

ಆದ್ದರಿಂದ, ಸಮಾಜದಲ್ಲಿ ಶಾಂತಿ ಕದಡುವ ಹಾಗು ಈ ನೆಲದ, ಈ ದೇಶದ ಕಾನೂನನ್ನು ಗೌರವಿಸದ ಮತ್ತು ಭಯೋತ್ಪಾದನೆಯಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪಿ ಪರವಾಗಿ ಮಾನ್ಯ ನ್ಯಾಯಾಲಯದಲ್ಲಿ ಸಂಘದ ಪದಾಧಿಕಾರಿಗಳೇ ಆಗಲಿ ಅಥವಾ ಸದದಸ್ಯರುಗಳೇ ಆಗಲಿ ಅಥವಾ ಇನ್ಯಾವುದೇ ಜಿಲ್ಲೆಯ ನ್ಯಾಯವಾದಿಗಳೇ ಆಗಲಿ ಆರೋಪಿಯ ಪರ ವಕಾಲತ್ತು ನಡೆಸದಾಗಿ ಕರೆ ನೀಡಬೇಕು. ಈ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿ ಇರುವಂತಹ ತಾವುಗಳು ಸಮಾಜಘಾತುಕರ ವಿರುದ್ಧ ಕಾನೂನು ಸಮರಕ್ಕೆ ಸಹಕಾರ ನೀಡಬೇಕೆಂದು ಎಂದು ಬಜರಂಗದಳ ಮನವಿ ಮಾಡಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago