Featured

ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ – Vishwanews24

ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ : ಆಸ್ಪತ್ರೆ ಎದುರು ಶವ ಇಟ್ಟು ಪ್ರತಿಭಟನೆ

ಮಂಗಳೂರು: ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬುಧವಾರ ನಗರದ ಖಾಸಗಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಯಿತು.

ವೇಣೂರು ನಿವಾಸಿ ಪ್ರದೀಪ್‌ ಅವರ ಪತ್ನಿ ಶಿಲ್ಪಾ (34) ಮೃತಪಟ್ಟವರು. ಅವರು ಎರಡನೇ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಶಿಲ್ಪಾ ಅವರು ಮೇ 28ರಂದು ಮನೆಯವರ ಜತೆ ಬಂದು ಸ್ಕ್ಯಾನಿಂಗ್‌ ಮಾಡಿಸಿಕೊಂಡು ಹೋಗಿದ್ದರು. ಆಗ ತಾಯಿ ಮತ್ತು ಮಗುವಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿ ಜು. 6ರಂದು ಹೆರಿಗೆಗೆ ದಿನಾಂಕ ಕೊಟ್ಟಿದ್ದರು. ಜು. 2ರಂದು ಬೆನ್ನು ನೋವು ಎಂದು ಶಿಲ್ಪಾ ಅವರು ತಾಯಿ ಜತೆ ಆಸ್ಪತ್ರೆಗೆ ಬಂದಿದ್ದರು. ಆಗ ತಪಾಸಣೆ ಮಾಡುತ್ತಿದ್ದ ವೈದ್ಯೆಗೆ ಡ್ಯೂಟಿ ಡಾಕ್ಟರ್‌ ಕರೆ ಮಾಡಿ ವಿಷಯ ತಿಳಿಸಿದ್ದರು. ಆದರೆ ರವಿವಾರವಾದ ಕಾರಣ ಅವರು ಬರಲು ಆಗುವುದಿಲ್ಲ ಎಂದಿದ್ದರು. ಆಸ್ಪತ್ರೆಯವರು ಅವರನ್ನು ದಾಖಲು ಮಾಡಿಕೊಂಡು ಸಿಸೇರಿಯನ್‌ ಮೂಲಕ ಮಗುವನ್ನು ಹೊರಗೆ ತೆಗೆದಿದ್ದಾರೆ. ಈ ಸಂದರ್ಭ ಶಿಲ್ಪಾ ಅವರಿಗೆ ರಕ್ತಸ್ರಾವ ಹೆಚ್ಚಾಗಿದೆ.

ಗರ್ಭಕೋಶದಲ್ಲಿ ತೊಂದರೆ ಇದೆಯೆಂದು ವೈದ್ಯರು ಗರ್ಭಕೋಶವನ್ನು ತೆಗೆದಿದ್ದರು. ಅಷ್ಟರಲ್ಲಿ ಶಿಲ್ಪಾ ಕೋಮಾಕ್ಕೆ ಹೋಗಿದ್ದರು. ಸುಮಾರು 22 ದಿನ ಕೋಮಾದಲ್ಲಿದ್ದ ಅವರು ಚೇತರಿಸಿಕೊಳ್ಳದೆ ಸೋಮವಾರ ಮೃತಪಟ್ಟಿದ್ದಾರೆ. ಆ ಬಳಿಕ ವೈದ್ಯರಾಗಲಿ, ಆಸ್ಪತ್ರೆಯ ಆಡಳಿತ ಮಂಡಳಿಯವರಾಗಲಿ ನಮಗೆ ಸ್ಪಂದನೆ ನೀಡಿಲ್ಲ. ಆಕೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಆ್ಯಂಬುಲೆನ್ಸ್‌ಗೆ ತಡೆ
ಮಳೆಯನ್ನು ಲೆಕ್ಕಿಸದೆ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸಲಾಯಿತು. ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ದಿಕ್ಕಾರ ಕೂಗಿದ ಪ್ರತಿಭಟನಕಾರರು ಶವವನ್ನು ವೆನ್ಲಾಕ್ ಗೆ ಕೊಂಡೊಯ್ಯಲು ಬಂದಿದ್ದ ಆ್ಯಂಬುಲೆನ್ಸ್‌ಗೆ ತಡೆಯೊಡ್ಡಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ನಡೆಯಿತು. ವಿಶ್ವಕರ್ಮ ಕೆಲಸಗಾರರ ಸಂಘದ ಜಿಲ್ಲಾಧ್ಯಕ್ಷ ಹರೀಶ್‌ ಆಚಾರ್ಯ, ಜಾಗೃತ ಮಹಿಳಾ ವೇದಿಕೆ ಅಧ್ಯಕ್ಷೆ ಪವಿತ್ರಾ ಆಚಾರ್ಯ ಮೊದಲಾದವರು ಸ್ಥಳದಲ್ಲಿದ್ದರು.

ಸಾವಿನ ಕಾರಣ ಮನವರಿಕೆ ಯತ್ನ
ನಮ್ಮ ಆಸ್ಪತ್ರೆಯ ಮೆಡಿಕಲ್‌ ಕಾಲೇಜಿನಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಡೀನ್‌ ಹಾಗೂ ವೈದ್ಯರು ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾವಿಗೆ ಕಾರಣ ಏನು ಎಂಬುದನ್ನು ಮನವರಿಕೆ ಮಾಡಲು ಯತ್ನಿಸಿದ್ದಾರೆ. ನಾನು ಮಂಗಳೂರಿನಲ್ಲಿ ಇಲ್ಲದೆ ಇರುವುದರಿಂದ ಎರಡು ದಿನ ಬಿಟ್ಟು ಆಸ್ಪತ್ರೆಗೆ ಭೇಟಿ ನೀಡಿ ನಡೆದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಳ್ಳುತ್ತೇನೆ.
– ಡಾ| ಪ್ರಶಾಂತ್‌ ಮಾರ್ಲ
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಮತ್ತು ಸಂಶೋಧನ ಕೇಂದ್ರ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago