Featured

ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ಮಂಗಳೂರು,: ಬಾಲಕನಿಗೆ ಕೆಮ್ಮು, ಉಸಿರಾಟ ತೊಂದರೆ, ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿ, ಎಕ್ಸ್‌ರೇ ತೆಗೆ ದಾಗ ಶ್ವಾಸಕೋಶದಲ್ಲಿ ಗುಂಡುಸೂಜಿ ಕಂಡು ಬಂದಿರುವ ಪ್ರಕರಣವೊಂದು ನಗರದ ಹೊರ ವಲಯದ ಬಜಾಲ್‌ನಿಂದ ವರದಿಯಾಗಿದೆ.

ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶಿರ್ (12) ಎಂಬವರ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ಸುಮಾರು 15 ದಿನಗಳಿಂದ ಮುಬಶ್ಶಿರ್‌ಗೆ ನಿರಂತವಾಗಿ ಕೆಮ್ಮು, ಜ್ವರ ಕಂಡುಬಂದಿತ್ತು. ಇದೊಂದು ಸಾಮಾನ್ಯ ರೋಗ ಲಕ್ಷಣವೆಂದು ಪರಿಗಣಿಸಿದ್ದ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದರೂ ಕೆಮ್ಮು ನಿಂತಿರಲಿಲ್ಲ. ಜ್ವರವೂ ಮತ್ತೆ ಕಾಡತೊಡಗಿತು. ಈ ಹಿನ್ನೆಲೆಯಲ್ಲಿ ಪೋಷಕರು ಆತನನ್ನು ತಜ್ಞ ವೈದ್ಯರಿಗೆ ತೋರಿಸಿದರು.

ಇದನ್ನೂ ಓದಿ : ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ ಪೊಲೀಸ್ ಠಾಣೆಯೇ ಆಸರೆ -Vishwanews24

ಕಂಕನಾಡಿಯ ಮಕ್ಕಳ ತಜ್ಞವೈದ್ಯ ಡಾ.ರಾಮ್‌ಗೋಪಾಲ್ ಶಾಸ್ತ್ರಿಯವರಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಎಕ್ಸ್‌ರೇ ತೆಗೆಸಿದಾಗ ಮುಬಶ್ಶಿರ್‌ನ ಶ್ವಾಸಕೋಶದಲ್ಲಿ ಗುಂಡುಸೂಜಿ ಇರುವುದು ಪತ್ತೆಯಾದಾಗ ವೈದ್ಯರು ಸಹಿತ ಪೋಷಕರು ಆಶ್ವರ್ಯಚಕಿತರಾಗಿದ್ದರು. ಆದರೆ ಮುಬಶ್ಶೀರ್ ನಿಗೆ ಗುಂಡುಸೂಜಿ ಹೇಗೆ ಶ್ವಾಸಕೋಶ ಸೇರಿತೆಂದೇ ಗೊತ್ತಿಲ್ಲದಿರುವುದು ಮತ್ತೊಂದು ಅಚ್ಚರಿಯಾಗಿದೆ.

ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಬಾಲಕನ ಬಲಬದಿಯ ಶ್ವಾಸಕೋಶದಲ್ಲಿ ನೋಟಿಸ್ ಬೋರ್ಡಿಗೆ ಬಳಸಲಾಗುವ ಗುಂಡುಸೂಜಿ ಪತ್ತೆಯಾಗಿದೆ. ಬಾಲಕನಿಗೆ ಶಸ್ತ್ರಚಿಕಿತ್ಸೆ ನೀಡಲೆಂದು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಕೂಲಂಕಷವಾಗಿ ಪರೀಕ್ಷಿಸಿದ ವೈದ್ಯರು, ವೈದ್ಯಕೀಯ ಉಪಕರಣವೊಂದನ್ನು ಬಳಸಿ ಪೈಪ್ ಮಾದರಿಯ ವಸ್ತುವೊಂದರ ಸಹಾಯದಿಂದ ಗುಂಡುಸೂಜಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

ಇದನ್ನೂ ಓದಿ : ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

14 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

17 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

17 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

18 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

18 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

18 hours ago