ಮಂಗಳೂರು,: ಬಾಲಕನಿಗೆ ಕೆಮ್ಮು, ಉಸಿರಾಟ ತೊಂದರೆ, ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ವೈದ್ಯರನ್ನು ಸಂಪರ್ಕಿಸಿ, ಎಕ್ಸ್ರೇ ತೆಗೆ ದಾಗ ಶ್ವಾಸಕೋಶದಲ್ಲಿ ಗುಂಡುಸೂಜಿ ಕಂಡು ಬಂದಿರುವ ಪ್ರಕರಣವೊಂದು ನಗರದ ಹೊರ ವಲಯದ ಬಜಾಲ್ನಿಂದ ವರದಿಯಾಗಿದೆ.
ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ಖಾದರ್ ಎಂಬವರ ಪುತ್ರ ಮುಬಶ್ಶಿರ್ (12) ಎಂಬವರ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆಯಾಗಿದೆ.
ಸುಮಾರು 15 ದಿನಗಳಿಂದ ಮುಬಶ್ಶಿರ್ಗೆ ನಿರಂತವಾಗಿ ಕೆಮ್ಮು, ಜ್ವರ ಕಂಡುಬಂದಿತ್ತು. ಇದೊಂದು ಸಾಮಾನ್ಯ ರೋಗ ಲಕ್ಷಣವೆಂದು ಪರಿಗಣಿಸಿದ್ದ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅಲ್ಪ ಪ್ರಮಾಣದಲ್ಲಿ ಚೇತರಿಕೆ ಕಂಡುಬಂದರೂ ಕೆಮ್ಮು ನಿಂತಿರಲಿಲ್ಲ. ಜ್ವರವೂ ಮತ್ತೆ ಕಾಡತೊಡಗಿತು. ಈ ಹಿನ್ನೆಲೆಯಲ್ಲಿ ಪೋಷಕರು ಆತನನ್ನು ತಜ್ಞ ವೈದ್ಯರಿಗೆ ತೋರಿಸಿದರು.
ಇದನ್ನೂ ಓದಿ : ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ ಪೊಲೀಸ್ ಠಾಣೆಯೇ ಆಸರೆ -Vishwanews24
ಕಂಕನಾಡಿಯ ಮಕ್ಕಳ ತಜ್ಞವೈದ್ಯ ಡಾ.ರಾಮ್ಗೋಪಾಲ್ ಶಾಸ್ತ್ರಿಯವರಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು. ಎಕ್ಸ್ರೇ ತೆಗೆಸಿದಾಗ ಮುಬಶ್ಶಿರ್ನ ಶ್ವಾಸಕೋಶದಲ್ಲಿ ಗುಂಡುಸೂಜಿ ಇರುವುದು ಪತ್ತೆಯಾದಾಗ ವೈದ್ಯರು ಸಹಿತ ಪೋಷಕರು ಆಶ್ವರ್ಯಚಕಿತರಾಗಿದ್ದರು. ಆದರೆ ಮುಬಶ್ಶೀರ್ ನಿಗೆ ಗುಂಡುಸೂಜಿ ಹೇಗೆ ಶ್ವಾಸಕೋಶ ಸೇರಿತೆಂದೇ ಗೊತ್ತಿಲ್ಲದಿರುವುದು ಮತ್ತೊಂದು ಅಚ್ಚರಿಯಾಗಿದೆ.
ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24
ಬಾಲಕನ ಬಲಬದಿಯ ಶ್ವಾಸಕೋಶದಲ್ಲಿ ನೋಟಿಸ್ ಬೋರ್ಡಿಗೆ ಬಳಸಲಾಗುವ ಗುಂಡುಸೂಜಿ ಪತ್ತೆಯಾಗಿದೆ. ಬಾಲಕನಿಗೆ ಶಸ್ತ್ರಚಿಕಿತ್ಸೆ ನೀಡಲೆಂದು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತು. ಕೂಲಂಕಷವಾಗಿ ಪರೀಕ್ಷಿಸಿದ ವೈದ್ಯರು, ವೈದ್ಯಕೀಯ ಉಪಕರಣವೊಂದನ್ನು ಬಳಸಿ ಪೈಪ್ ಮಾದರಿಯ ವಸ್ತುವೊಂದರ ಸಹಾಯದಿಂದ ಗುಂಡುಸೂಜಿಯನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ಇದನ್ನೂ ಓದಿ : ಉಡುಪಿ : ಕೋಟ ಶ್ರೀ ಅಮೃತೇಶ್ವರಿ ದೇವಿಗೆ ಮುಸ್ಲಿಂ ಕುಟುಂಬದಿಂದ ತುಲಾಭಾರ ಸೇವೆ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…