Featured

ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ – vishwanews24

ಮಂಗಳೂರು: ಬಾಲಕಿಯ ಅಪಹರಿಸಿ ಅತ್ಯಾಚಾರ ಪ್ರಕರಣ ; ಆರೋಪಿ ಖುಲಾಸೆ

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ವಿರುದ್ಧ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತೀರ್ಮಾನಿಸಿದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಈ ತೀರ್ಪು ಪ್ರಕಟಿಸಿದ್ದಾರೆ ಎಂದು ಆರೋಪಿ ಪರ ವಕೀಲ ಸುಕೇಶ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

 ಇದನ್ನೂ ಓದಿ:

ಪ್ರಕರಣದ ವಿವರ: 2025ರ ಜುಲೈ ಎರಡನೇ ವಾರದಲ್ಲಿ ಮೂಲ್ಕಿ ಬಪ್ಪನಾಡು ದೇವಸ್ಥಾನದ ಬಳಿಯಿಂದ ಅಪ್ರಾಪ್ತೆಯನ್ನು ಆರೋಪಿ ತನ್ನ ಬೈಕ್‌ನಲ್ಲಿ ಉಡುಪಿ ಜಿಲ್ಲೆಯ ಕಾಪು ಬೀಚ್‌ಗೆ ಕರೆದೊಯ್ದು ಅಲ್ಲಿನ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಮನೆಯವರಿಗೆ ತಿಳಿಸಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ, ದಿನಾಂಕ 23-07-2025ರಂದು ದೂರು ದಾಖಲಿಸಿಕೊಂಡ ಮೂಲ್ಕಿ ಠಾಣೆ ಪೊಲೀಸರು, ಆರೋಪಿಯನ್ನು ಅದೇ ದಿನ ಬಂಧಿಸಿದ್ದರು. ನೊಂದ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿ ಎಂಬುದು ಗೊತ್ತಾಗಿತ್ತು. ತನಿಖೆ ನಡೆಸಿದ ಪೊಲೀಸರು ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ, ನೊಂದ ಬಾಲಕಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ 8 ಮಂದಿ ಸಾಕ್ಷಿಗಳ ವಿಚಾರಣೆ ನಡೆಸಿದ್ದು, 26 ದಾಖಲೆಗಳು ಹಾಗೂ ಒಂದು ಮೊಬೈಲ್‌ನ್ನು ಸಾಕ್ಷಿಯಾಗಿ ಗುರುತಿಸಲಾಗಿತ್ತು.

 ಇದನ್ನೂ ಓದಿ:

ಅಭಿಯೋಜನೆಯ ಪರವಾಗಿ ಸಾಕ್ಷಿ ನೀಡಿದ್ದ ನೊಂದ ಬಾಲಕಿ ಹಾಗೂ ಪೋಷಕರು ಅತ್ಯಾಚಾರ ನಡೆದಿದೆ ಎಂಬುದನ್ನು ಹೇಳಿದ್ದರು. ಸಾಕ್ಷಿಗಳೂ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನೀಡಿದ್ದರು. ಆದರೆ, ಬಲವಾದ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಆರೋಪಿ ಮೇಲೆ ಹೊರಿಸಲಾದ ಆರೋಪವನ್ನು ಸಾಬೀತುಪಡಿಸುವಲ್ಲಿ ಅಭಿಯೋಜನೆ ವಿಫಲವಾಗಿದೆ ಎಂದು ತೀರ್ಮಾನಿಸಿದ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿಯನ್ನು ಖುಲಾಸೆಗೊಳಿಸಿ ತೀರ್ಪು ಪ್ರಕಟಿಸಿದರು.

 

Vishwa News 24

Recent Posts

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

16 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

25 minutes ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

40 minutes ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

55 minutes ago

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

3 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

3 hours ago