ಮಂಗಳೂರು, : ಸಿಎಂ ಬದಲಾವಣೆ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ವಿಚಾರದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಜು.19 ರ ಸೋಮವಾರ ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಆಡಿಯೋಗೂ ನನಗೂ ಯಾವುದೇ ಸಂಬಂಧವಿಲ್ಲ’ ಎಂದಿದ್ದಾರೆ.
ಇನ್ನು ಇಂದು ಆರಂಭವಾಗಲಿರುವ ಸಂಸತ್ ಮುಂಗಾರು ಅಧಿವೇಶನಕ್ಕಾಗಿ ದೆಹಲಿಗೆ ತೆರಳಬೇಕಾಗಿದ್ದ ನಳಿನ್ ಪರಿಸ್ಥಿತಿ ಅವಲೋಕನಕ್ಕಾಗಿ ಸದನ ಅನುಮತಿ ಪಡೆದು ಅಧಿವೇಶನಕ್ಕೆ ಗೈರಾಗಿ ನಗರದಲ್ಲೇ ಉಳಿದುಕೊಳ್ಳಲಿದ್ದಾರೆ . ಅಲ್ಲದೆ ಇಂದೇ ಮುಖ್ಯಮಂತ್ರಿಗೆ ಆಡಿಯೋ ತನಿಖೆಗಾಗಿ ಪತ್ರಬರೆದು ಒತ್ತಾಯಿಸಲಿದ್ದಾರೆ. ನಾಳೆ ಬೆಳಗ್ಗೆ ೯ ಗಂಟೆಗೆ ದೆಹಲಿಗೆ ತೆರಳುವ ಸಾಧ್ಯತೆಗಳಿವೆ .
ಮಾಧ್ಯಮದೊಂದಿಗೆ ಮಾತನಾಡಿರುವ ನಳಿನ್ ” ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಪತ್ರ ಬರಿತೇನೆ. ಈ ಬಗ್ಗೆ ತನಿಖೆಯಾಗಬೇಕು. ತನಿಖೆಯ ಬಳಿಕ ಆಡಿಯೋದ ಸತ್ಯಾಸತ್ಯತೆ ಹೊರಬರಲಿದೆ ಎಂದಿರುವ ಕಟೀಲ್, ನಾಯಕತ್ವ ಬದಲಾವಣೆ ಕುರಿತು ನಮ್ಮಲ್ಲಿ ಯಾವುದೇ ಚರ್ಚೆಗಳಿಲ್ಲ. ನಮ್ಮ ಪಾರ್ಟಿಗೆ ಆತ್ಮ ಯಡಿಯೂರಪ್ಪ. ಯಡಿಯೂರಪ್ಪ ನಮ್ಮ ಸರ್ವ ಸಮ್ಮತದ ನಾಯಕ. ಈಶ್ವರಪ್ಪ, ಜಗದೀಶ್ ಶೆಟ್ಟರ್ ಪಾರ್ಟಿಯ ಎರಡು ಕಣ್ಣುಗಳು ಇದ್ದಂತೆ ಎಂದು ಹೇಳಿದ್ದಾರೆ
‘ನಿಖೆಯಾಗದೇ ಯಾರ ಬಗ್ಗೆಯೂ ಸಂಶಯ ವ್ಯಕ್ತಪಡಿಸಲ್ಲ. ತನಿಖೆ ಮೂಲಕ ಸತ್ಯ ಹೊರಬರಲಿ. ಎಲ್ಲದಕ್ಕೂ ಬಳಿಕ ಉತ್ತರ ನೀಡ್ತೇನೆ’ ಎಂದಿರುವ ಕಟೀಲ್, ಇವತ್ತು ಅಧಿವೇಶನಕ್ಕೆ ಹೋಗ್ತಾ ಇದ್ದು, ಆಡಿಯೋ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆಯೂ ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…