Featured

ಮಂಗಳೂರು : ಬಿಜೆಪಿಯ ನಿರ್ಲಕ್ಷ್ಯ ಭಾವನೆಯಿಂದಾಗಿ ಮುಗ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಿರುವುದು ನಾಚೀಕೆಗೇಡು : ಅಕ್ಷಿತ್‌ ಸುವರ್ಣ ಆಕ್ರೋಶ – Vishwanews24

ಇಡೀ ರಾಜ್ಯಕ್ಕೆ ಹಿಜಾಬ್‌ ಮತ್ತು ಕೇಸರಿ ವಿವಾದ ಬೆಂಕಿ ಹಚ್ಚಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾನಗರಿ ಎಂದು ಕರೆಯುತ್ತಿರುವ ಉಡುಪಿ ಜಿಲ್ಲೆಯ ಮಾನವನ್ನು ಹರಾಜು ಹಾಕುವ ಕೆಲಸ ಸರಕಾರ ನಡೆಸಿದೆ..

ಮಂಗಳೂರು: ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಇಂದು ಹಿಜಾಬ್‌ ವಿಚಾರ ಬೇರೆ ಬೇರೆ ಕೋಮು ಬಣ್ಣವನ್ನು ಪಡೆದು ರಾಜ್ಯ ವ್ಯಾಪಿ ಅಲ್ಲದೆ ದೇಶವ್ಯಾಪಿ ಹರಡಲು ಕಾರಣವಾಗಿದೆ. ಸಮಸ್ಯೆ ಆರಂಭವಾದಾಗಲೇ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳದೆ ಬಿಜೆಪಿ ಸರಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲಸ ಮಾಡಿದ್ದರಿಂದ ಇಂದು ಕೈ ಮೀರಿ ಹೋಗಿದೆ. ಇವರ ನಿರ್ಲಕ್ಷ್ಯ ಭಾವನೆಯಿಂದಾಗಿ ಮುಗ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸ ಮಾಡಿರುವುದು ನಾಚೀಕೆಗೇಡು ಎಂದು ದಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಜಾಬ್‌ ವಿಚಾರ ಉಡುಪಿ ಜಿಲ್ಲೆಯ ಒಂದು ಸರಕಾರಿ ಕಾಲೇಜಿನಲ್ಲಿ ಸಮಸ್ಯೆಯಾದಾಗ ಆಗಲೇ ಅಲ್ಲಿನ ಸ್ಥಳೀಯ ಶಾಸಕರು ಹಾಗೂ ಆಡಳಿತ ಮಂಡಳಿ ಸರಕಾರದ ಜೊತೆಗೆ ಸೇರಿಕೊಂಡು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕಿತ್ತು. ಬಿಜೆಪಿ ಸರಕಾರಕ್ಕೆ ಇದೊಂದು ಚುನಾವಣಾ ವಿಚಾರವಾಗಿ ಮುಂದುವರೆಸುವ ಆಸೆ ಇದ್ದ ಪರಿಣಾಮ ಸಮಸ್ಯೆ ದೊಡ್ಡದಾಗಲು ಅವಕಾಶ ಮಾಡಿಕೊಟ್ಟಿದೆ. ಇದಲ್ಲದೆ ಇತ್ತೀಚೆಗೆ ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರದಿಂದ ಮುಖಭಂಗ ಅನುಭವಿಸಿದ ಬಿಜೆಪಿ ಸರಕಾರಕ್ಕೆ ಆ ವಿಷಯವನ್ನು ಮರೆಮಾಚುವ ಅಗತ್ಯದಿಂದ ಹಿಜಾಬ್‌ ವಿಚಾರವನ್ನು ಮುನ್ನಲೆಗೆ ತಂದಿದೆ. ತಮ್ಮ ಸರಕಾರದ ಹುಳುಕನ್ನು ಮುಚ್ಚಲು ಬಿಜೆಪಿ ಸರಕಾರಕ್ಕೆ ಒಳ್ಳೆಯ ವಿಚಾರ ಸಿಕ್ಕಿದ್ದು ಈ ಮೂಲಕ ಇಡೀ ರಾಜ್ಯಕ್ಕೆ ಹಿಜಾಬ್‌ ಮತ್ತು ಕೇಸರಿ ವಿವಾದ ಬೆಂಕಿ ಹಚ್ಚಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇಂದು ಈ ವಿಚಾರ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾನಗರಿ ಎಂದು ಕರೆಯುತ್ತಿರುವ ಉಡುಪಿ ಜಿಲ್ಲೆಯ ಮಾನವನ್ನು ಹರಾಜು ಹಾಕುವ ಕೆಲಸ ಸರಕಾರ ನಡೆಸಿದೆ ಎಂದರೆ ತಪ್ಪಾಗಲಾರದು.

ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಆರಂಭಿಸಿದ ಬೇಟಿ ಬಚಾವೋ ಬೇಟಿ ಪಢಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ. ಕುಂದಾಪುರದಲ್ಲಿ ಇತ್ತೀಚೆಗೆ ಹಿಜಾಬ್‌ ವಿಚಾರದಲ್ಲಿ ವಿದ್ಯಾರ್ಥಿನಿಯರನ್ನು ಕಾಲೇಜಿನ ಗೇಟಿನ ಒಳಗೂ ಬರಲು ಅವಕಾಶ ನೀಡದೆ ಬಿಸಿಲಿಗೆ ರಸ್ತೆಯಲ್ಲಿ ಕುಳಿತುಕೊಳಿಸಿರುವುದು ಬಿಜೆಪಿಯವರಿಗೆ ಮಹಿಳೆಯರ ಹಾಗೂ ವಿದ್ಯಾರ್ಥೀನಿಯರ ಕಾಳಜಿ ಏನು ಎನ್ನುವುದು ಎದ್ದು ತೋರುತ್ತದೆ. ಕೋವಿಡ್‌ ಕಾಲದಲ್ಲಿ ಶಾಲೆಗಳು ಸರಿಯಾಗಿ ನಡೆದಿಲ್ಲ ಎಂದು ವಿಧ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಸಮಯದಲ್ಲಿ ಹಿಜಾಬ್‌ ವಿವಾದ ಅನಗತ್ಯ ಸೃಷ್ಟಿ ಮಾಡಲಾಗಿದೆ

ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸು ಆಳುವ ಸರಕಾರಕ್ಕೆ ಹಾಗೂ ನಾಯಕರಿಗೆ ನಿಜವಾಗಿ ಇದ್ದಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲುಗಳ ವಿಷಯವನ್ನು ಕೂಡಲೇ ನಿಲ್ಲಿಸಬೇಕು. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಎರಡು ಸಮುದಾಯದ ಸಂಘಟನೆಗಳನ್ನು ಕಾಲೇಜು ಆವರಣಕ್ಕೆ ಬರದಂತೆ ತಡೆಯುವ ಕೆಲಸ ಜಿಲ್ಲಾಡಳಿತದಿಂದ ನಡೆಯಬೇಕಾಗಿದೆ. ಅನಗತ್ಯ ಕೋಮು ಭಾವನೆ ಕೆರಳಿಸುವ ಕೆಲಸವನ್ನು ಮಾಡುವ ಕೆಲಸ ಮಾಡುವ ಸಂಘಟನೆಗಳಿಗೆ ಜಿಲ್ಲಾಡಳಿತ ಕೂಡಲೇ ಎಚ್ಚರಿಕೆ ನೀಡಬೇಕು. ಮುಗ್ದ ವಿದ್ಯಾರ್ಥಿಗಳು ಎಲ್ಲರೂ ಒಟ್ಟಾಗಿ ಸೇರಿ ಶಿಕ್ಷಣದ ಮೂಲಕ ತಮ್ಮ ಭವಿಷ್ಯ ಕಾಣುವ ಸಂದರ್ಭದಲ್ಲಿ ಶಿಕ್ಷಣದಲ್ಲಿ ವಿಷ ತುಂಬುವುದು ಬೇಡ. ಬಿಜೆಪಿ ಸರಕಾರ ಇಂಥ ಸೂಕ್ಷ್ಮ ವಿಷಯ ಇನ್ನಷ್ಟು ಬೆಳೆಯಲು ಅವಕಾಶ ನೀಡದೇ ಸೂಕ್ತ ರೀತಿಯಲ್ಲಿ ನಿಭಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

13 minutes ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

29 minutes ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

40 minutes ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

45 minutes ago

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ – vishwanews24

ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…

1 hour ago

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ – vishwanews24

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…

1 hour ago