ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ  : ಮುನೀರ್ ಕಾಟಿಪಳ್ಳ

ಮಂಗಳೂರು: ಕಾರ್ಪೊರೇಟ್ ಹಿತಾಸಕ್ತಿಗಳ ಪರವಾದ ಬಿಜೆಪಿ ಅಭ್ಯರ್ಥಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಲಿಸುವ ಪ್ರತಿಜ್ಞೆಯೊಂದಿಗೆ ಆಪ್, ಸಿಪಿಐ, ಸಿಪಿಎಂ, ಜನತಾದಳವನ್ನು ಒಳಗೊಂಡ ಜಾತ್ಯತೀತ ಪಕ್ಷಗಳು ಹಾಗೂ ಜಿಲ್ಲೆಯ ವಿವಿಧ ಸಮಾನ ಮನಸ್ಕ ಸಂಘಟನೆಗಳ ಪ್ರತಿನಿಧಿಗಳು ವೇದಿಕೆಯಲ್ಲಿ ಐಕ್ಯ ಪ್ರದರ್ಶಿಸಿದ್ದಾರೆ.

ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಜನ ಸಮಾವೇಶದಲ್ಲಿ ಜಿಲ್ಲೆಯ ನೈಜ ಅಭಿವೃದ್ಧಿ ಹಾಗೂ ಸೌಹಾರ್ದಕ್ಕಾಗಿ 25ರಷ್ಟು ವಿವಿಧ ಪಕ್ಷ ಹಾಗೂ ಸಂಘಟನೆಗಳ ಪ್ರತಿನಿಧಿಗಳು ಪರಸ್ಪರ ಕೈಜೋಡಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದರು. ಈ ಸಂದರ್ಭ ರಾಜ್ಯದಲ್ಲಿ ಎನ್ಡಿಎ ಮೈತ್ರಿಕೂಟದ ಜತೆ ಗುರುತಿಸಿಕೊಂಡಿರುವ ಜನತಾ ದಳದ ಜಿಲ್ಲಾ ಘಟಕದ ಪ್ರಮುಖರು ನಝೀರ್ ಉಳ್ಳಾಲ್ ನೇತೃತ್ವದಲ್ಲಿ ಜನ ಸಮಾವೇಶದಲ್ಲಿ ದ.ಕ. ಜಿಲ್ಲಾ ಜನತಾ ಪರಿವಾರದ ಹೆಸರಿನಲ್ಲಿ ಬೆಂಬಲ ಸೂಚಿಸಿದರು.

ಮಸ್ಕತ್ : ಒಮಾನ್ ನಲ್ಲಿ ಪ್ರವಾಹ, ಭಾರೀ ಮಳೆ : ಮಕ್ಕಳು ಸೇರಿ 19 ಮಂದಿ ಸಾವು – Vishwanews24

ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಮುನೀರ್ ಕಾಟಿಪಳ್ಳ ಕೊರೋನ ಸಂಕಷ್ಟದ ನಡುವೆ ನಿರುದ್ಯೋಗ, ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ರಾಜ್ಯದ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳಿಂದಾಗಿ ಉಸಿರಾಡುವಂತಾಗಿದೆ. ಆದರೆ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿ ಅಧಿಕಾರಕ್ಕೆ ಬಂದರೆ, ರಾಜ್ಯದ ಶಾಸಕರನ್ನು ಅಪರೇಶನ್ ಕಮಲದ ಮೂಲಕ ಖರೀದಿಸಿ ಸರಕಾರವನ್ನು ಅಸ್ತಿರಗೊಳಿಸಿ ಗ್ಯಾರಂಟಿಗಳನ್ನೇ ಬಂದ್ ಮಾಡಲಿದ್ದಾರೆ ಎಂದು ಹೇಳಿದರು.

ಗ್ಯಾರಂಟಿಯನ್ನು ವಿರೋಧಿಸುವ ಬಿಜೆಪಿಯ ಶಾಸಕರನ್ನೇ ಅಧಿಕ ಸಂಖ್ಯೆಯಲ್ಲಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯೇ ಗ್ಯಾರಂಟಿಗಳ ಫಲಾನುಭವಿಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿದೆ. ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಅಮಲನ್ನು ಮತದಾರರಲ್ಲಿ ತುಂಬಿಸಿ ಜನರ ನೈಜ ಸಮಸ್ಯೆಗಳನ್ನು ಮರೆಮಾಚುತ್ತಿರುವ ಬಿಜೆಪಿಯನ್ನು ಸೋಲಿಸಬೇಕು ಎಂದವರು ಹೇಳಿದರು.

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ – Vishwanews24

10 ವರ್ಷಗಳ ಹಿಂದೆ ವಿದೇಶದಲ್ಲಿರುವ ಕಪ್ಪು ಹಣ ತರುತ್ತೇವೆ. ಜನರಿಗೆ ಹಂಚುತ್ತೇವೆ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುತ್ತೇವೆ. ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿಸಿ ವಿಶ್ವ ಗುರು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ಈಗ ಡಾಲರ್ನೆದರು ರೂಪಾಯಿ ಮೌಲ್ಯ ಮತ್ತಷ್ಟು ಕುಸಿದು ವಿಶ್ವದೆದುರು ಬೆತ್ತಲಾಗಿದ್ದಾರೆ. ತಾನು ನೀಡಿರುವ ಭರವಸೆ ಈಡೇರದ ಬಗ್ಗೆ ಮಾತನಾಡದೆ ಇದೀಗ ಮತ್ತೆ ತಮ್ಮ ಕರಪತ್ರದಲ್ಲಿ ರಾಮಮಂದಿರ ಕಟ್ಟಿದ್ದೇವೆ, ಮುಸ್ಲಿಮ್ ಮಹಿಳೆಯರಿಗೆ ನ್ಯಾಯ ಕೊಟ್ಟಿದ್ದೇವೆ ಎಂಬ ಮಾತುಗಳನ್ನು ಜನ ನಂಬುವ ಸ್ಥಿತಿಯಲ್ಲಿ ಇಲ್ಲ. ಭ್ರಷ್ಟಾಚಾರ ಮುಕ್ತಗೊಳಿಸುವುದಾಗಿ ಹೇಳಿ ದೇಶವನ್ನು ವಿಶ್ವಗುರು ಮಾಡುವುದಾಗಿ ಹೇಳಿದವರು ಇಂದು ಭ್ರಷ್ಟರನ್ನೆಲ್ಲಾ ಆಸೆ, ಆಮಿಷ ಒತ್ತಡಕ್ಕೆ ಸಿಲುಕಿ ತಮ್ಮ ಪಕ್ಷದ ವಾಶಿಂಗ್ ಮಿಶನ್ಗೆ ಇಳಿಸಿ ಪರಿಶುದ್ಧ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಅಭಿವೃದ್ಧಿ, ಬದುಕಿನ ಸಮಸ್ಯೆಗಳಬದಲಿಗೆ ಧರ್ಮಗಳ ಧ್ರುವೀಕರಣ, ತನ್ನ ರಾಜಕೀಯ ಟೂಲ್ ಕಿಟ್ ಗಾಇ ಹಿಂದುತ್ವವನ್ನೇ ಮುನ್ನಲೆಗೆ ತರಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಜನಸಾಮಾನ್ಯರು ತಕ್ಕ ಉತ್ತರ ನೀಡಬೇಕು ಎಂದು ಮುನೀರ್ ಕಾಟಿಪಳ್ಳ ಹೇಳಿದರು.

ಮುಂಬೈ:  ಬಾಲಿವುಡ್ ನಟ ಸಲ್ಮಾನ್ ಖಾನ್ ನಿವಾಸದ ಹೊರಗೆ ಗುಂಡಿನ ದಾಳಿ ಪ್ರಕರಣ : ಇಬ್ಬರು ಆರೋಪಿಗಳ ಬಂಧನ – Vishwanews24

Leave a Reply