Featured

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ – vishwanews24

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ

ಮಂಗಳೂರು: ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಆರೋಪಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ಸೋಮವಾರ ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ.

ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ. ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ. ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದರು. ಪೊಲೀಸರು ಕಾನೂನು ಮೀರಿ ಕೆಲಸ ಮಾಡಿದ್ದರೆ ಅದಕ್ಕೆ ಸರಕಾರ, ಕಾನೂನು, ನ್ಯಾಯಾಲಯವಿದೆ. ಪೊಲೀಸರು ಸುಮ್ಮನಾದರೆ ಏನೂ ಮಾಡಿಲ್ಲ ಎಂದು ಆರೋಪಿಸುವ ಬಿಜೆಪಿಗರು, ಪೊಲೀಸರು ತಮ್ಮ ಕೆಲಸ ಮಾಡಿದರೆ ಆಕ್ಷೇಪಿಸುತ್ತಾರೆ.

ಬಿಜೆಪಿಗರ ಉದ್ದೇಶವಾದರೂ ಏನು? ಜಿಲ್ಲೆ ಸದಾ ಅಶಾಂತಿಯಿಂದ ಕೂಡಿರಬೇಕೇ? ಅಭಿವೃದ್ಧಿಯು ಬಿಜೆಪಿಗೆ ಬೇಡವೇ? ಪೊಲೀಸ್ ಇಲಾಖೆಯಿಂದ ತಪ್ಪು ಆಗಿರುವುದಾದರೂ ಏನು? ಯಾರ ಮೇಲೆ ಸುಳ್ಳು ಕೇಸು ಹಾಕಲಾಗಿದೆ ಎಂಬುದನ್ನಾದರೂ ತಿಳಿಸಲಿ ಎಂದು ಸವಾಲು ಹಾಕಿದ ಐವನ್ ಡಿಸೋಜ, ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಚ್ಯುತಿತರುವ ಬಿಜೆಪಿ ಮುಖಂಡರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago