Featured

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ – vishwanews24

ಮಂಗಳೂರು : ಬಿಜೆಪಿ ನಾಯಕರು ಪೊಲೀಸರ ಆತ್ಮ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ : ಐವನ್ ಡಿಸೋಜ

ಮಂಗಳೂರು: ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಆರೋಪಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ಸೋಮವಾರ ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ.

ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ. ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ. ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದರು. ಪೊಲೀಸರು ಕಾನೂನು ಮೀರಿ ಕೆಲಸ ಮಾಡಿದ್ದರೆ ಅದಕ್ಕೆ ಸರಕಾರ, ಕಾನೂನು, ನ್ಯಾಯಾಲಯವಿದೆ. ಪೊಲೀಸರು ಸುಮ್ಮನಾದರೆ ಏನೂ ಮಾಡಿಲ್ಲ ಎಂದು ಆರೋಪಿಸುವ ಬಿಜೆಪಿಗರು, ಪೊಲೀಸರು ತಮ್ಮ ಕೆಲಸ ಮಾಡಿದರೆ ಆಕ್ಷೇಪಿಸುತ್ತಾರೆ.

ಬಿಜೆಪಿಗರ ಉದ್ದೇಶವಾದರೂ ಏನು? ಜಿಲ್ಲೆ ಸದಾ ಅಶಾಂತಿಯಿಂದ ಕೂಡಿರಬೇಕೇ? ಅಭಿವೃದ್ಧಿಯು ಬಿಜೆಪಿಗೆ ಬೇಡವೇ? ಪೊಲೀಸ್ ಇಲಾಖೆಯಿಂದ ತಪ್ಪು ಆಗಿರುವುದಾದರೂ ಏನು? ಯಾರ ಮೇಲೆ ಸುಳ್ಳು ಕೇಸು ಹಾಕಲಾಗಿದೆ ಎಂಬುದನ್ನಾದರೂ ತಿಳಿಸಲಿ ಎಂದು ಸವಾಲು ಹಾಕಿದ ಐವನ್ ಡಿಸೋಜ, ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಚ್ಯುತಿತರುವ ಬಿಜೆಪಿ ಮುಖಂಡರ ಮೇಲೆ ರಾಜ್ಯ ಸರಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Vishwa News 24

Recent Posts

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

32 minutes ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

58 minutes ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

1 hour ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

2 hours ago

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ – vishwanews24

ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…

2 hours ago