ಮಂಗಳೂರು: ಕರ್ನಾಟಕದಲ್ಲಿ ಅಪ್ಪ ಮಕ್ಕಳನ್ನು ಪಕ್ಷದಿಂದ ಮುಕ್ತ ಮಾಡಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ಪಕ್ಷದ ಶುದ್ಧೀಕರಣ ಆಗಬೇಕು. ಖಂಡಿತಾ ಆಗುತ್ತದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ರಘುಪತಿ ಭಟ್ ಪರ ಅವರು ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತವನ್ನು ಇಟ್ಟುಕೊಂಡು ಕೆಲಸ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಇದಕ್ಕೆ ತಿಲಾಂಜಲಿ ಇಟ್ಟು ಬಿಜೆಪಿ ನಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಸಂಸ್ಕೃತಿ ಕರ್ನಾಟಕ ಬಿಜೆಪಿಯಲ್ಲಿ ಬಂದಿರೋದು ನೋವು ತಂದಿದೆ ಎಂದರು.
ಕರ್ನಾಟಕದಲ್ಲಿ ಹಿಂದುತ್ವ ಹಿಂದೆ ಸರಿದು ಜಾತೀಯತೆಗೆ ಸರಿಯುತ್ತಿರುವ ಸಂದರ್ಭ, ಪಕ್ಷ, ಹಿಂದುತ್ವ ಎಂದು ಬಯಸುವ ಎಲ್ಲ ಕಾರ್ಯಕರ್ತರು ರಘುಪತಿ ಭಟ್ ಪರ ಕೆಲಸ ಮಾಡಬೇಕು. ಬಿಜೆಪಿ ಶುದ್ಧೀಕರಣ ಆಗಬೇಕು. ರಘುಪತಿ ಗೆಲ್ಲುತ್ತಾರೆ. ಹಿಂದುತ್ವಕ್ಕೆ ಆಗುತ್ತಿರುವ ಅವಮಾನ, ರಘುಪತಿ ಭಟ್ ಹಾಗೂ ನನಗೆ ಆಗಿರುವ ಅನ್ಯಾಯ ಬಗ್ಗೆ ಎಲ್ಲರೂ ಗಮನಿಸುತ್ತಿದ್ದಾರೆ. ಕಾಂಗ್ರೆಸ್ ನಿಂದ ಬಂದ ಅಭ್ಯರ್ಥಿ ಗೆ ಟಿಕೆಟ್ ನೀಡಿರುವುದಕ್ಕೆ ಅರ್ಥವೇ ಇಲ್ಲ. ಹಿಂದುತ್ವದ ನೆಲೆ ಸ್ವಾರ್ಥಿಗಳ ಕೈ ಸೇರಿದೆ. ಇದನ್ನು ಮತ್ತೆ ಪಡೆಯಲು ಎಲ್ಲರೂ ಕೆಲಸ ಮಾಡಬೇಕು ಎಂದರು.
ಇದು ವಿಶೇಷವಾದ ಚುನಾವಣೆ. ಬಿಜೆಪಿ ದೇಶದಲ್ಲಿ ಒಂದು ಸಿದ್ದಾಂತದಲ್ಲಿ ಕಾರ್ಯ ನಿರ್ವ ಹಿಸುತ್ತಿದ್ದರೆ ರಾಜ್ಯದಲ್ಲಿ ಅದಕ್ಕೆ ತಿಲಾಂಜಲಿ ಇಟ್ಟು ಕಾರ್ಯ ನಿರ್ವಹಿಸುತ್ತಿದೆ. ಜನತಾ ಪಕ್ಷ ಕಟ್ಟಿದ್ದು ಇತಿಹಾಸ. ವಿಶ್ವವನ್ನು ಒಂದು ಗೂಡಿ ಸುವ ನಿಟ್ಟಿನಲ್ಲಿ ಕಾಂಗ್ರೆಸ್ ನ ಕುಟುಂಬ ರಾಜಕೀಯದ ವಿರುದ್ಧ ಕೆಲಸ ಆಗುತ್ತಿದ್ದರೆ, ಕರ್ನಾಟಕದಲ್ಲಿ ಬಿಜೆಪಿ ಅಪ್ಪ ಮಕ್ಕಳ ಕೈಯಲ್ಲಿದೆ. ಇದರ ನೋವಲ್ಲಿ ಕಾರ್ಯಕರ್ತರಿದ್ದಾರೆ ಎಂದರು.
ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಮಿತಿಮೀರಿದೆ. ವಿಧಾನಸಭಾ ಚುನಾವಣೆಯ ವೇಳೆಯೂ 45 ವರ್ಷಗಳಿಂದ ನನ್ನ ಜೊತೆ ಕೆಲಸ ಮಾಡಿದ ಉಡುಪಿಯ ರಘುಪತಿ ಭಟ್ ಗೆ ನೋವಾಗಿದೆ. ನನಗಾದರೂ ದೆಹಲಿಯಿಂದ ಕರೆ ಬಂದಿತ್ತು. ರಘುಪತಿ ಭಟ್ ಗೆ ಅದೂ ಬಂದಿಲ್ಲ. ಅವರು ಪಕ್ಷ ನಿಷ್ಠೆ ಬಿಟ್ಟಿಲ್ಲ. ಈ ಚುನಾವಣೆಯಲ್ಲಿ ಮತ್ತೆ ಅನ್ಯಾಯವಾಗಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…