ಮಂಗಳೂರು : ‘ಬಿಜೆಪಿಯೂ ತಾವು ಧರ್ಮದ ಹೆಸರಿನಲ್ಲಿ ಮತ ಗಳಿಸುತ್ತೇವೆ ಹೊರತು ಅಭಿವೃದ್ಧಿಯಿಂದಲ್ಲ ಎಂಬ ತಪ್ಪು ಕಲ್ಪನೆ ಹೊಂದಿದ್ದು, ಬಿಜೆಪಿ ಪಶ್ಚಾತ್ತಾಪ ಪಡುವ ದಿನ ಬರಲಿದೆ’ ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.
ಮೇ 2 ರ ಸೋಮವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, “ವಾಣಿಜ್ಯ ಎಲ್ಪಿಜಿ ಬೆಲೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದು ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರುತ್ತಿದೆ. ಬೆಲೆ ಏರಿಕೆ ನಿಯಂತ್ರಣದಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳೇ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಅಂದಿನ ವಿರೋಧ ಪಕ್ಷ ಬಿಜೆಪಿ ಇಂಧನ ಬೆಲೆ ಏರಿಕೆಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿತ್ತು. ಆಗಿನ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರವನ್ನುಎಂದೂ ದೂಷಿಸಿರಲಿಲ್ಲ” ಎಂದು ರೈ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿತು. ಸಿದ್ದರಾಮಯ್ಯ ಆಡಳಿತದಲ್ಲಿದ್ದಾಗ ಮಾಡಿದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಕಾರ್ಯವನ್ನಷ್ಟೆ ಪ್ರಸಕ್ತ ರಾಜ್ಯ ಸರಕಾರ ಮಾಡುತ್ತಿದೆ. ಇದಲ್ಲದೆ ತಾವು ರಾಜ್ಯದ ಅಭಿವೃದ್ಧಿಯಿಂದಲ್ಲ, ಧರ್ಮದ ಹೆಸರಿನಲ್ಲಿ ಮತ ಪಡೆಯುತ್ತೇವೆ ಎಂಬ ತಪ್ಪು ಕಲ್ಪನೆ ಬಿಜೆಪಿಗಿದೆ. ಆದರೆ ಇದಕ್ಕಾಗಿ ವಿಷಾದಿಸುವ ಸಮಯ ಶೀಘ್ರದಲ್ಲೇ ಬರಬಹುದು ಎಂದು ಎಚ್ಚರಿಸಿದ್ದಾರೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಶಶಿಧರ್ ಹೆಗಡೆ, ಅಪ್ಪಿ, ನವೀನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…