Featured

ಮಂಗಳೂರು : ಬಿಜೆಪಿ ರಾಷ್ಟ್ರೀಯವಾದಿ ಪಕ್ಷ , ರಾಜಕೀಯ ಲಾಭಕ್ಕಾಗಿ ಪಿಎಫ್ಐ, ಎಸ್‌ಡಿಪಿಐ ಬ್ಯಾನ್ ಮಾಡುತ್ತಿಲ್ಲ ಎಂಬ ವಿಶ್ವಾಸವಿದೆ : ದೇವಿಪ್ರಸಾದ್ ಶೆಟ್ಟಿ – Vishwanews24

ಪಿಎಫ್ಐ, ಎಸ್‌ಡಿಪಿಐ ಬ್ಯಾನ್‌ಗೆ ಕಾಂಗ್ರೆಸ್ ಕರೆ ನೀಡಿದ್ದಲ್ಲಿ ಖಂಡಿತಾ ಅವರ ಜೊತೆಗೂಡುತ್ತೇವೆ.

ಬಿಜೆಪಿ ರಾಷ್ಟ್ರೀಯವಾದಿ ಪಕ್ಷ , ರಾಜಕೀಯ ಲಾಭಕ್ಕಾಗಿ ಪಿಎಫ್ಐ, ಎಸ್‌ಡಿಪಿಐ ಬ್ಯಾನ್ ಮಾಡುತ್ತಿಲ್ಲ ಎಂಬ ವಿಶ್ವಾಸವಿದೆ

ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್‌ನ ವಿಭಾಗೀಯ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಹೇಳಿಕೆ

ಮಂಗಳೂರು: ಪಿಎಫ್ಐ, ಎಸ್‌ಡಿಪಿಐ ಬ್ಯಾನ್‌ಗೆ ಕಾಂಗ್ರೆಸ್ ಕರೆ ನೀಡಿದ್ದಲ್ಲಿ ನೂರಕ್ಕೆ ನೂರು ಪ್ರತಿಶತ ಅವರ ಅಭಿಪ್ರಾಯದೊಂದಿಗೆ ಜೊತೆಗೂಡುತ್ತೇವೆ. ರಾಷ್ಟ್ರವಿರೋಧಿಗಳ ವಿರುದ್ಧ ಯಾರು ಹೋರಾಡುತ್ತಾರೋ ಅವರೊಂದಿಗೆ ನಾವು ಕೈಜೋಡಿಸುತ್ತೇವೆ. ಮುಸ್ಲಿಂ ಸಂಘಟನೆ ಈ ಬಗ್ಗೆ ಕರೆ ನೀಡಿದರೂ ನಾವು ಸಹಮತ ಸೂಚಿಸುತ್ತೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಸಾವರ್ಕರ್ ಫೋಟೋ ಅಳವಡಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ ಮಂಗಳೂರಿನ ಗುರುಪುರದಲ್ಲಿ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿ ರಾದ್ಧಾಂತ ಸೃಷ್ಟಿ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಬಿಜೆಪಿ ಸರಕಾರ ಎರಡೂ ಸಂಘಟನೆಗಳನ್ನು ತಕ್ಷಣ ಬ್ಯಾನ್ ಮಾಡಬೇಕು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಬಗ್ಗೆ ಇನ್ನಷ್ಟು ವಿಚಾರಗಳನ್ನು ಹಂಚುವ ಮೂಲಕ ಅಭಿಯಾನ ಕೈಗೊಳ್ಳಲಾಗುತ್ತದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

ಬಿಜೆಪಿ ಯುವಮೋರ್ಚ ನೇತೃತ್ವದಲ್ಲಿ ಸಾವರ್ಕರ್ ಬ್ಯಾನರ್ ಇರುವ ಬ್ರಹ್ಮಗಿರಿ ಸರ್ಕಲ್ಗೆ ಚೆಂಡು ಹೂವಿನ ಅಲಂಕಾರ: vishwanews24

ಈ ಸಂಘಟನೆಗಳನ್ನು ನಿಷೇಧ ಮಾಡದಿದ್ದಲ್ಲಿ ಸಮಾಜ ಬಹಳ ದೊಡ್ಡ ಅಪಾಯವನ್ನು ಎದುರಿಸಬೇಕಾಗುತ್ತದೆ. ಬಿಜೆಪಿ ರಾಜಕೀಯ ಲಾಭಕ್ಕಾಗಿ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ಬ್ಯಾನ್ ಮಾಡುತ್ತಿಲ್ಲ ಎಂಬುದನ್ನು ನಾವು ಒಪ್ಪೋದಿಲ್ಲ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ಖಂಡಿತಾ ಆ ಮಟ್ಟಕ್ಕೆ ಅದು ಇಳಿಯಲಿಕ್ಕಿಲ್ಲ ಎಂಬ ವಿಶ್ವಾಸವಿದೆ. ಈ ವಿಚಾರಗಳಲ್ಲಿ ಬಿಜೆಪಿಯೊಂದಿಗೆ ನಮ್ಮ ಭಿನ್ನತೆಯಿದೆ. ದೇಶವಿರೋಧಿ ಸಂಘಟನೆಗಳ ಬ್ಯಾನ್ ವಿಚಾರದಲ್ಲಿ ಬಿಜೆಪಿ ನಮ್ಮ ಪಕ್ಷ ಎಂದು ನಾವು ಅದಕ್ಕೆ ಬೆಂಬಲ ನೀಡುವುದಿಲ್ಲ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು

ಸುರತ್ಕಲ್ ಫಾಝಿಲ್ ಹತ್ಯೆಯನ್ನು ನಾವು ಸಮರ್ಥನೆ ಮಾಡೋದಿಲ್ಲ. ಆದರೆ ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಹಿಂದೂಗಳ ಹತ್ಯೆಯಾಗುತ್ತಿದೆ. ಇದರಿಂದ ಹಿಂದೂ ಯುವಕರಲ್ಲಿ ಆಕ್ರೋಶ ನಿರ್ಮಾಣವಾಗಿದೆ. ಯಾವುದೇ ಕೃತ್ಯದಲ್ಲಿ ಗುರುತಿಸಿಕೊಳ್ಳದ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ‌. ಅದರ ಪ್ರತಿಫಲ ಸುರತ್ಕಲ್ ಫಾಝಿಲ್ ಕೊಲೆಯಲ್ಲಿ ಕೊನೆಗೊಂಡಿದೆ. ಹತ್ಯೆಯನ್ನು ನಾವು ಸಮರ್ಥಿಸೋದಿಲ್ಲ. ಆದರೆ ಹಿಂದೂ ಸಮಾಜ ಎಂದೂ ಕೈಕಟ್ಟಿ ಕೂರೋದಿಲ್ಲ ಎಂದು ದೇವಿಪ್ರಸಾದ್ ಶೆಟ್ಟಿ ಹೇಳಿದರು.

ಬ್ರಹ್ಮಗಿರಿ ಸರ್ಕಲ್ ನಲ್ಲಿ ಅಳವಡಿಸಿದ ಸಾವರ್ಕರ್ ಬ್ಯಾನರ್ ಗೆ ಪುಷ್ಪಾರ್ಚನೆ ಮಾಡಿದ ಯಶ್ಪಾಲ್ ಸುವರ್ಣ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

5 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

5 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

5 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

5 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago