ಪುತ್ತೂರು: ಮಹಿಳೆಯೋರ್ವರು ಪ್ರತಿಷ್ಠಿತ ರಾಜಕಾರಣಿ ಹಾಗೂ ಜನಪ್ರತಿನಿಧಿಯ ಜೊತೆಗಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಕುರಿತು ಮಹಿಳೆಯು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಹಿಂದೆ ರಾಜಕೀಯದಲ್ಲಿ ಸಕ್ರಿಯವಾಗಿದ್ದ ನೆಕ್ಕಿಲಾಡಿ ಸಮೀಪದ ಮಹಿಳೆ ಏ.5 ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಹಿಳೆ, “ನನ್ನ ವೈಯುಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಜೊತೆ ಹೊಂದಾಣಿಕೆ ಮಾಡಿಕೊಂಡು ವೈರಲ್ ಮಾಡುತ್ತಿದ್ದಾರೆ. ಇದರಿಂದಾಗಿ ನನಗೆ ಮತ್ತು ಮನೆ ಮಂದಿಗೆ ತುಂಬಾ ನೋವಾಗಿದ್ದು, ಮಹಿಳೆಯಾಗಿ ನನ್ನ ಮೇಲೆ ದೌರ್ಜನ್ಯ ಮಾಡುವುದು ತಪ್ಪು” ಎಂದಿದ್ದಾರೆ.
ಇನ್ನು “ನನಗೂ ಶಾಸಕರಿಗೆ ಯಾವುದೇ ರೀತಿಯ ಸಂಬಂಧವಿಲ್ಲ. ಅದೂ ಅಲ್ಲದೆ ಓರ್ವ ಮಹಿಳೆಯ ಮೇಲೆ ಇಷ್ಟು ದೊಡ್ಡ ಆರೋಪ ಸರಿಯಲ್ಲ. ಇದರ ಹಿಂದೆ ಇರುವವರ ವಿರುದ್ದ ಸೂಕ್ತ ಶಿಕ್ಷೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.
ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಪೋಟೊವನ್ನು ನಕಲು ಮಾಡಲಾಗಿದೆಯೋ ಎಂಬ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊಗಳು ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿದ್ದು, ಮುಂಬರುವ ವಿಧಾನ ಸಭಾ ಚುನಾವಣೆಯ ಮೇಲೆ ಈ ಫೋಟೋಗಳು ಪರಿಣಾಮ ಬೀರುವ ಸಾಧ್ಯತೆಯಿದೆಯೆಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…