ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು.
ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಬಿಜೆಪಿಯ ಸದಸ್ಯತ್ವ ಪಡೆದುಕೊಂಡರು. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು.ಅಲ್ಲದೇ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಯುವ ಮೋರ್ಛಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಂಡಲ ಮಹಿಳಾ ಮೋರ್ಛಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಈ ಸಂದರ್ಭದಲ್ಲಿ ಹಾಜರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…