ಮಂಗಳೂರು: ಬಿರುವೆರ್ ಕುಡ್ಲ ವತಿಯಿಂದ ಇದರ ಸಂಸ್ಥಾಪಕ ಉದಯ್ ಪೂಜಾರಿ ಅವರ ನೇತೃತ್ವದಲ್ಲಿ ಮೂರು ಕುಟುಂಬಗಳಿಗೆ ಜನವರಿ 19 ರಂದು ಕುದ್ರೋಳಿ ದೇವಸ್ಥಾನದಲ್ಲಿ 1 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ವೆಚ್ಚದ ಚೆಕ್ ವಿತರಿಸಲಾಯಿತು.
ಈ ವೇಳೆ ಶಾಸಕ ವೇದವ್ಯಾಸ್ ಕಾಮತ್ ಮಾತನಾಡಿ, ಬಿರುವೆರ್ ಕುಡ್ಲ ಇದರ ಸಂಸ್ಥಾಪಕ ಅಧ್ಯಕ್ಷ ಉದಯ ಪೂಜಾರಿ ಅವರ ನೇತೃತ್ವದಲ್ಲಿ ಹಲವಾರು ವರ್ಷಗಳಿಂದ ನಿರ್ಗತಿಕರಿಗೆ ಸಹಾಯ ಮಾಡುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಹಲವು ವರ್ಷಗಳಿಂದ ಒಂದು ಕೋಟಿಗೂ ಅಧಿಕ ಹಣವನ್ನು ದಾನವಾಗಿ ವಿತರಿಸಿ ಬಡವರ ಕಣ್ಣೀರು ಒರೆಸಿದ್ದಾರೆ. ಇಂದು ಮೂರು ಕುಟುಂಬಗಳಿಗೆ ಅವರ ವೈದ್ಯಕೀಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಮೌಲ್ಯದ ಚೆಕ್ ವಿತರಿಸಿದ್ದಾರೆ ಎಂದರು.
ಪುರಸಭಾಧ್ಯಕ್ಷ ಜಯಾನಂದ ಅಂಚನ್, ಅಧ್ಯಕ್ಷ ಬಿರುವೆರ್ ಕುಡ್ಲ ರಾಕೇಶ್ ಪೂಜಾರಿ, ರಾಕೇಶ್ ಚಿಲಿಂಬಿ, ಲೋಹಿತ್ ಗಟ್ಟಿ, ರೆನಿತ್ ರಾಜ್, ರಾಮ್ ಎಕ್ಕೂರ್, ಕಿಶೋರ್ ಬಾಬು, ಅಜಿತ್ ದುಬೈ, ರೋಶನ್ ಬಳ್ಳಾಲಬಾಗ್, ಅಶ್ವಿತ್ ಚಿಲಿಂಬಿ, ಪ್ರಶಾಂತ್, ಸುನಿ ಅಶೋಕನಗರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…