ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಲ್ಲವ ಸಮುದಾಯದ ಎಲ್ಲಾ ಅಭ್ಯರ್ಥಿಗಳನ್ನು ನಾರಾಯಣಗುರು ವಿಚಾರ ವೇದಿಕೆ ಪಕ್ಷತೀತವಾಗಿ ಬೆಂಬಲಿಸಲಿದೆ ಎಂದು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸತ್ಯಜೀತ್ ಅವರು ದಕ್ಷಿಣ ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಶಿವರಾಜ್ ಕುಮಾರ್ ಚುನಾವಣಾ ಕಣದಲ್ಲಿದ್ದು ವೇದಿಕೆ ಅವರನ್ನು ಬೆಂಬಲಿಸಲಿದೆ ಎಂದರು. ವೇದಿಕೆ ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಸತ್ಯಜೀತ್ ಅವರು ಬದಲು ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸುವ ಮೂಲಕ ಸಮುದಾಯದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪ್ರಗತಿಗೆ ಶ್ರಮಿಸುವವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಹಳ ವರ್ಷಗಳ ನಂತರ ಮೂರು ಸ್ಥಾನ ಗಳಲ್ಲಿ ನಾರಾಯಣ ಗುರು ಸಮಾಜಕ್ಕೆ ಅವಕಾಶ ಸಿಕ್ಕಿದೆ. ಬಿಜೆಪಿ ಯಲ್ಲಿ 33ವರ್ಷಗಳ ಬಳಿಕ ಬಿಲ್ಲವ ಅಭ್ಯರ್ಥಿಗೆ ಅವಕಾಶ ಸಿಕ್ಕಿದೆ.ದಕ್ಷಿಣ ಕನ್ನಡ ಕಾಂಗ್ರೆಸ್ ನಲ್ಲಿ ಜನಾರ್ಧನ ಪೂಜಾರಿಯ ಬಳಿಕ ಈಗ ಪದ್ಮರಾಜ್ ಗೆ ಅವಕಾಶ ಸಿಕ್ಕಿದೆ.ಪದ್ಮರಾಜ್, ಗೀತಾ ಶಿವರಾಜಕುಮಾರ್,ಕೋಟ ಶ್ರೀನಿವಾಸ ಪೂಜಾರಿ ಪರ ಪ್ರಚಾರ ಮಾಡುತ್ತೇವೆ.ರಾಜಕೀಯ ಪಕ್ಷವನ್ನ ಪಕ್ಕಕಿಟ್ಟು ಬಿಲ್ಲವ ಸಮಾಜ ಎಂದು ದುಡಿಯುತ್ತೇವೆ. ಯಾರು ಏನು ಬೇಕಾದರೂ ಹೇಳಬಹುದು, ಸಾಮಾಜಿಕ ಜಾಲತಾಣಗಳಲ್ಲಿ ಬರೀಬಹುದು,ನನ್ನ ಕಷ್ಟದ ದಿನಗಳಲ್ಲಿ ಯಾರು ನಿಂತುಕೊಂಡಿದ್ರು ಅವರ ಮಾತನ್ನ ಮಾತ್ರ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…