ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋ.ರೂ. ಬಿಡುಗಡೆ, ಬಿಲ್ಲವ ಸಮಾಜವನ್ನು ಈಗಿರುವ 2ಎ ಯಿಂದ ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡುವುದೂ ಸೇರಿದಂತೆ ಪ್ರಮುಖ ಹಾಗೂ ದೀರ್ಘಕಾಲಿಕ ಬೇಡಿಕೆಗಳನ್ನು ಮುಂದಿರಿಸಿ 41 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳ ಪೀಠಾಧಿಪತಿ ಡಾ| ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿ ದಂತೆ 26 ಪಂಗಡಗಳ ಬೇಡಿಕೆಗಳ ಈಡೇರಿಕೆಗಾಗಿ ಅವುಗಳ ಮುಖಂಡರ ಬೆಂಬಲದಡಿ 2026 ರ ಜನವರಿ 6 ರಿಂದ ಕರದಾಳದಿಂದ ಬೆಂಗಳೂರು ವರೆಗೆ 41 ದಿನಗಳ 700 ಕಿ.ಮೀ ನ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ ಎಂದರು.
ಕುಲಕಸುಬು ಕಳೆದು ಕೊಂಡ ಈಡಿಗರಿಗೆ ಭೂಮಿ ಮಂಜೂರು, ಬೆಂಗಳೂರಿನ ವಿಧಾನ ಸೌಧ ಎದುರು ನಾರಾಯಣಗುರುಗಳ ಪುತ್ಥಳಿ ಸ್ಥಾಪನೆ ಸೇರಿದಂತೆ ಬೇಡಿಕೆಗಳನ್ನು ಅವರು ಉಲ್ಲೇಖೀಸಿದರು.
ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿರುವ ಮೊಕ ದ್ದಮೆಗಳನ್ನು ಹಿಂತೆಗೆದು ದೇವ ಸ್ಥಾನಕ್ಕೆ ಭದ್ರತೆ ಒದಗಿಸಬೇಕು, ಕೋಟಿ ಚೆನ್ನಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗೆ ಪ್ರತಿ ಬಜೆಟ್ನಲ್ಲಿ ಸಮರ್ಪಕ ಅನುದಾನ ನೀಡಬೇಕು, ವಿಶ್ವವಿದ್ಯಾಲಯಗಳಲ್ಲಿ ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪನೆ ಹಾಗೂ ಹೆಂಡದ ಮಾರಯ್ಯ ಜಯಂತಿ ಯನ್ನು ಅಧಿಕೃತವಾಗಿ ಆಚರಿಸುವಂತೆ ಸರಕಾರಕ್ಕೆ ಮನವಿ ಮಾಡಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಹೆಸರಿಡು ವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದ ಅವರು, ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ರಾಜ್ಯದಲ್ಲಿ ಶೇಂದಿ ಇಳಿಕೆಗೆ ನಿಷೇಧವಿದೆ. ಹಾಗಾಗಿ ನಮ್ಮ ಸಮುದಾಯದವರು ಉದ್ಯೋಗ ಕಳೆದುಕೊಂಡಿದ್ದಾರೆ. ಹಾಗಾಗಿ ಮದ್ಯವ್ಯಾಪಾರದದಲ್ಲಿ ನಮ್ಮ ಪಂಗಡದವರಿಗೆ ಮೀಸಲು ಕೊಡಿ. ಒಂದುವೇಳೆ ಮದ್ಯ ಬೇಡವೆಂದಾದರೆ ಪಬ್, ಬಾರ್ ಎಲ್ಲವನ್ನೂ ಬಂದ್ ಮಾಡಿ ಎಂದು ಆಗ್ರಹಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…