ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ಕೂಡಲೇ 500 ಕೋ.ರೂ. ಬಿಡುಗಡೆ, ಬಿಲ್ಲವ ಸಮಾಜವನ್ನು ಈಗಿರುವ 2ಎ ಯಿಂದ ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರಕಾರಕ್ಕೆ ರಾಜ್ಯ ಸರಕಾರ ಶಿಫಾರಸು ಮಾಡುವುದೂ ಸೇರಿದಂತೆ ಪ್ರಮುಖ ಹಾಗೂ ದೀರ್ಘಕಾಲಿಕ ಬೇಡಿಕೆಗಳನ್ನು ಮುಂದಿರಿಸಿ 41 ದಿನಗಳ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಕರದಾಳ ಪೀಠಾಧಿಪತಿ ಡಾ| ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಡಿಗ, ಬಿಲ್ಲವ, ನಾಮಧಾರಿ, ದೀವರು ಸೇರಿ ದಂತೆ 26 ಪಂಗಡಗಳ ಬೇಡಿಕೆಗಳ ಈಡೇರಿಕೆಗಾಗಿ ಅವುಗಳ ಮುಖಂಡರ ಬೆಂಬಲದಡಿ 2026 ರ ಜನವರಿ 6 ರಿಂದ ಕರದಾಳದಿಂದ ಬೆಂಗಳೂರು ವರೆಗೆ 41 ದಿನಗಳ 700 ಕಿ.ಮೀ ನ ಐತಿಹಾಸಿಕ ಪಾದಯಾತ್ರೆ ನಡೆಯಲಿದೆ ಎಂದರು.
ಕುಲಕಸುಬು ಕಳೆದು ಕೊಂಡ ಈಡಿಗರಿಗೆ ಭೂಮಿ ಮಂಜೂರು, ಬೆಂಗಳೂರಿನ ವಿಧಾನ ಸೌಧ ಎದುರು ನಾರಾಯಣಗುರುಗಳ ಪುತ್ಥಳಿ ಸ್ಥಾಪನೆ ಸೇರಿದಂತೆ ಬೇಡಿಕೆಗಳನ್ನು ಅವರು ಉಲ್ಲೇಖೀಸಿದರು.
ಶ್ರೀ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿರುದ್ಧ ಹೂಡಿರುವ ಮೊಕ ದ್ದಮೆಗಳನ್ನು ಹಿಂತೆಗೆದು ದೇವ ಸ್ಥಾನಕ್ಕೆ ಭದ್ರತೆ ಒದಗಿಸಬೇಕು, ಕೋಟಿ ಚೆನ್ನಯರ ಜನ್ಮಸ್ಥಳ ಮತ್ತು ಐಕ್ಯಸ್ಥಳ ಅಭಿವೃದ್ಧಿಗೆ ಪ್ರತಿ ಬಜೆಟ್ನಲ್ಲಿ ಸಮರ್ಪಕ ಅನುದಾನ ನೀಡಬೇಕು, ವಿಶ್ವವಿದ್ಯಾಲಯಗಳಲ್ಲಿ ನಾರಾಯಣ ಗುರು ಅಧ್ಯಯನ ಪೀಠ ಸ್ಥಾಪನೆ ಹಾಗೂ ಹೆಂಡದ ಮಾರಯ್ಯ ಜಯಂತಿ ಯನ್ನು ಅಧಿಕೃತವಾಗಿ ಆಚರಿಸುವಂತೆ ಸರಕಾರಕ್ಕೆ ಮನವಿ ಮಾಡಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಹೆಸರಿಡು ವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದ ಅವರು, ದಕ್ಷಿಣ ಕನ್ನಡ, ಉಡುಪಿ ಹೊರತುಪಡಿಸಿ ರಾಜ್ಯದಲ್ಲಿ ಶೇಂದಿ ಇಳಿಕೆಗೆ ನಿಷೇಧವಿದೆ. ಹಾಗಾಗಿ ನಮ್ಮ ಸಮುದಾಯದವರು ಉದ್ಯೋಗ ಕಳೆದುಕೊಂಡಿದ್ದಾರೆ. ಹಾಗಾಗಿ ಮದ್ಯವ್ಯಾಪಾರದದಲ್ಲಿ ನಮ್ಮ ಪಂಗಡದವರಿಗೆ ಮೀಸಲು ಕೊಡಿ. ಒಂದುವೇಳೆ ಮದ್ಯ ಬೇಡವೆಂದಾದರೆ ಪಬ್, ಬಾರ್ ಎಲ್ಲವನ್ನೂ ಬಂದ್ ಮಾಡಿ ಎಂದು ಆಗ್ರಹಿಸಿದರು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…